ಎಚ್ ಎಸ್ ದೊರೆಸ್ವಾಮಿ 
ರಾಜಕೀಯ

ಕಾಂಗ್ರೆಸ್ ಹೇಳಿಕೆಗೆ ಎಚ್ ಎಸ್ ದೊರೆಸ್ವಾಮಿ ಸೋಬಾನೆ: ಸಚಿವ ಈಶ್ವರಪ್ಪ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ಸಚಿವ ಕೆ.ಎಸ್‌.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ಸಚಿವ ಕೆ.ಎಸ್‌.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ವಾತಂತ್ರ್ಯ ದೊರೆಸ್ವಾಮಿ ಅವರು ಅಮೂಲ್ಯ ಜೊತೆಗಿರುವ ಫೋಟೋ ಪ್ರದರ್ಶಿಸಿದರು‌. ದೊರೆಸ್ವಾಮಿ ಅವರು ಅಮೂಲ್ಯ ಕುಟುಂಬದವರ ಜತೆ ಫೋಟೋ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ನವರು ಏನನ್ನೇ ಹೇಳಿದರೂ ದೊರೆಸ್ವಾಮಿ ಅದಕ್ಕೆ ಸೋಬಾನೆ ಹಾಡುತ್ತಾರೆ. ಸಿದ್ದರಾಮಯ್ಯ ನರೇಂದ್ರ ಮೋದಿ ಅವರನ್ನು ಕೊಲೆಗಡುಕ ಅಂದರು. ಅವತ್ತೇ ಕಾಂಗ್ರೆಸ್ ನವರು ಸಿದ್ದರಾಮಯ್ಯ ಅವರನ್ನು ಹೊರಗೆ ಹಾಕಬೇಕಾಗಿತ್ತು ಎಂದು ಕಿಡಿ ಕಾರಿದರು.

ಅಮೂಲ್ಯ ಜೊತೆ ಫೋಟೊ ತೆಗೆಸಿಕೊಂಡಿದ್ದು ಯಾಕೆ ಎಂಬುದನ್ನು ಮೊದಲು ದೊರೆಸ್ವಾಮಿ ಸ್ಪಷ್ಟಪಡಿಸಲಿ. ಅಷ್ಟೇ ಅಲ್ಲದೇ ಕನ್ನಯ್ಯ ಮತ್ತಿತರ  ಜತೆಯೂ ಯಾಕೆ ಫೋಟೊ ತೆಗೆಸಿಕೊಳ್ಳಲಾಯಿತು ಎಂದು ದೊರೆಸ್ವಾಮಿ ಸ್ಪಷ್ಟಪಡಿಸಲಿ. ನಾನು ದೊರೆಸ್ವಾಮಿ ಅವರನ್ನು ಪಾಕಿಸ್ತಾನ ಏಜೆಂಟ್ ಎಂದು ಕರೆಯುವುದಿಲ್ಲ. ಆದರೆ ನೀವು ಹಿರಿಯರಾಗಿ ನಮಗೆ ಮಾರ್ಗದರ್ಶನ ಮಾಡಿ‌ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಟ್ರಂಪ್ ಸೂಚನೆಗೆ ಕ್ಯಾರೆ ಎನ್ನದ ಇಸ್ರೇಲ್: ಇರಾನ್ ಮೇಲೆ ವೈಮಾನಿಕ ದಾಳಿ; ಟೆಹ್ರಾನ್ ವಾಯುಪ್ರದೇಶ ಬಂದ್, ಯುದ್ಧ ಪುನರಾರಂಭ ಸಾಧ್ಯತೆ

2028ರ ಚುನಾವಣಾ ತಯಾರಿಯಲ್ಲಿ ಕಾಂಗ್ರೆಸ್! ಬಿಜೆಪಿ-ಜೆಡಿಎಸ್ ಮತ ವಿಭಜನೆಯ ಚಿಂತೆ; ಉಳಿಯುತ್ತಾ NDA ಮೈತ್ರಿ?

ಇದೇ ಮೊದಲು, ಭಾರತದ ಯಾವುದೇ ಆಟಗಾರ ಮಾಡದ ಸಾಧನೆ ಮಾಡಿದ ನಾಯಕ ಶುಭ್ ಮನ್ ಗಿಲ್! ಏನಿದು ಹೊಸ ಇತಿಹಾಸ?

Women's T20 World Cup 2026: ಭಾರತ vs ಪಾಕಿಸ್ತಾನ ಪಂದ್ಯ, ಎಲ್ಲಿ, ಯಾವಾಗ ಗೊತ್ತಾ? ಇಲ್ಲಿದೆ ಸಂಪೂರ್ಣ ಮಾಹಿತಿ..

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಇರಾನ್ ಕ್ಷಿಪಣಿ ದಾಳಿ, ಗಾಜಾ ಗಡಿದ್ವಾರ ಬಂದ್; ‘ಪ್ರತಿದಾಳಿ ಬೇಡ’- ನೆತನ್ಯಾಹುಗೆ ಟ್ರಂಪ್ ಖಡಕ್ ಸಂದೇಶ

SCROLL FOR NEXT