ಎಚ್ ಎಸ್ ದೊರೆಸ್ವಾಮಿ 
ರಾಜಕೀಯ

ಕಾಂಗ್ರೆಸ್ ಹೇಳಿಕೆಗೆ ಎಚ್ ಎಸ್ ದೊರೆಸ್ವಾಮಿ ಸೋಬಾನೆ: ಸಚಿವ ಈಶ್ವರಪ್ಪ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ಸಚಿವ ಕೆ.ಎಸ್‌.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ಬೆಂಗಳೂರು: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ನೀಡಿದ ಹೇಳಿಕೆಯನ್ನು ಸಚಿವ ಕೆ.ಎಸ್‌.ಈಶ್ವರಪ್ಪ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಟಿಯಲ್ಲಿ ಸ್ವಾತಂತ್ರ್ಯ ದೊರೆಸ್ವಾಮಿ ಅವರು ಅಮೂಲ್ಯ ಜೊತೆಗಿರುವ ಫೋಟೋ ಪ್ರದರ್ಶಿಸಿದರು‌. ದೊರೆಸ್ವಾಮಿ ಅವರು ಅಮೂಲ್ಯ ಕುಟುಂಬದವರ ಜತೆ ಫೋಟೋ ತೊಡಗಿಸಿಕೊಂಡಿದ್ದಾರೆ. ಕಾಂಗ್ರೆಸ್ ನವರು ಏನನ್ನೇ ಹೇಳಿದರೂ ದೊರೆಸ್ವಾಮಿ ಅದಕ್ಕೆ ಸೋಬಾನೆ ಹಾಡುತ್ತಾರೆ. ಸಿದ್ದರಾಮಯ್ಯ ನರೇಂದ್ರ ಮೋದಿ ಅವರನ್ನು ಕೊಲೆಗಡುಕ ಅಂದರು. ಅವತ್ತೇ ಕಾಂಗ್ರೆಸ್ ನವರು ಸಿದ್ದರಾಮಯ್ಯ ಅವರನ್ನು ಹೊರಗೆ ಹಾಕಬೇಕಾಗಿತ್ತು ಎಂದು ಕಿಡಿ ಕಾರಿದರು.

ಅಮೂಲ್ಯ ಜೊತೆ ಫೋಟೊ ತೆಗೆಸಿಕೊಂಡಿದ್ದು ಯಾಕೆ ಎಂಬುದನ್ನು ಮೊದಲು ದೊರೆಸ್ವಾಮಿ ಸ್ಪಷ್ಟಪಡಿಸಲಿ. ಅಷ್ಟೇ ಅಲ್ಲದೇ ಕನ್ನಯ್ಯ ಮತ್ತಿತರ  ಜತೆಯೂ ಯಾಕೆ ಫೋಟೊ ತೆಗೆಸಿಕೊಳ್ಳಲಾಯಿತು ಎಂದು ದೊರೆಸ್ವಾಮಿ ಸ್ಪಷ್ಟಪಡಿಸಲಿ. ನಾನು ದೊರೆಸ್ವಾಮಿ ಅವರನ್ನು ಪಾಕಿಸ್ತಾನ ಏಜೆಂಟ್ ಎಂದು ಕರೆಯುವುದಿಲ್ಲ. ಆದರೆ ನೀವು ಹಿರಿಯರಾಗಿ ನಮಗೆ ಮಾರ್ಗದರ್ಶನ ಮಾಡಿ‌ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

ಡೆವಿಲ್‌' ಸಿನಿಮಾದ 'ಇದ್ರೆ ನೆಮ್ಮದಿಯಾಗಿ ಇರಬೇಕು' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT