ಎಂಟಿಬಿ ನಾಗರಾಜ್ - ಬಚ್ಚೇಗೌಡ 
ರಾಜಕೀಯ

ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಎಂಟಿಬಿ - ಬಚ್ಚೇಗೌಡ ಮುಖಾಮುಖಿ..!

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಂಸದ‌ ಬಚ್ಚೇಗೌಡ ಹಾಗೂ ಅವರ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಆದರೂ ಒಬ್ಬರ ಮುಖ ಒಬ್ಬರು ನೋಡದೇ ಕುದಿಮೌನ ಪ್ರದರ್ಶಿಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನಿವಾಸದಲ್ಲಿ ಬಿಜೆಪಿ ಸಂಸದ‌ ಬಚ್ಚೇಗೌಡ ಹಾಗೂ ಅವರ ರಾಜಕೀಯ ಎದುರಾಳಿ ಎಂಟಿಬಿ ನಾಗರಾಜ್ ಪರಸ್ಪರ ಮುಖಾಮುಖಿಯಾಗಿದ್ದಾರೆ. ಆದರೂ ಒಬ್ಬರ ಮುಖ ಒಬ್ಬರು ನೋಡದೇ ಕುದಿಮೌನ ಪ್ರದರ್ಶಿಸಿದ್ದಾರೆ.

ಡಾಲರ್ಸ್ ಕಾಲೋನಿಯಲ್ಲಿರುವ ಸಿಎಂ‌ ಬಿಎಸ್ವೈ ನಿವಾಸ ಧವಳಗಿರಿಗೆ ಸಂಸದ ಬಚ್ಚೇಗೌಡ ಭೇಟಿ ನೀಡಿದ್ದರು. ಬಚ್ಚೇಗೌಡ ಯಡಿಯೂರಪ್ಪ ಅವರ ಹುಟ್ಟಿದ ಹಬ್ಬಕ್ಕೆ ಶುಭ ಕೋರಿದರು. ಉಪ ಚುನಾವಣೆಯಲ್ಲಿ ಪುತ್ರನ ಸ್ಪರ್ಧೆ ತಪ್ಪಿಸಲು ವಿಫಲವಾದ ನಂತರ ತುಸು ಅಂತರ ಕಾಯ್ದುಕೊಂಡಿದ್ದ  ಬಚ್ಚೇಗೌಡರ ಇಂದು ಸಿಎಂ ಜೊತೆ ಕೆಲಕಾಲ ಅನೌಪಚಾರಿಕ ಮಾತುಕತೆ ನಡೆಸಿದರು.

ಈ ವೇಳೆ ಹೊಸಕೋಟೆ ಪರಾಜಿತ ಅಭ್ಯರ್ಥಿ ಎಂಟಿಬಿ ನಾಗರಾಜ್ ಕೂಡ ಮುಖ್ಯಮಂತ್ರಿ ನಿವಾಸಕ್ಕೆ ಆಗಮಿಸಿದರು. ಎಂಟಿಬಿ ಬರುತ್ತಿದ್ದಂತೆ‌ ಬಚ್ಚೇಗೌಡ ಸಿಎಂ ನಿವಾಸದಿಂದ ನಿರ್ಗಮಿಸಿದರು. ಈ ವೇಳೆ ಇಬ್ಬರು ಪರಸ್ಪರ ಎದುರುಬದುರಾದರೂ ಮಾತುಕತೆ ನಡೆಸದೇ ಕುದಿಮೌನ ಹೊರಹಾಕಿದ್ದಾರೆ.

ಬಚ್ಚೇಗೌಡ ನಿರ್ಗಮನದ ನಂತರ ಯಡಿಯೂರಪ್ಪ ಜೊತೆ ಎಂಟಿಬಿ ನಾಗರಾಜ್ ಮಾತುಕತೆ ನಡೆಸಿದರು. ನಿನ್ನೆ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಶುಭ ಕೋರಿದ್ದರೂ ಇಂದು ಮತ್ತೊಮ್ಮೆ ಭೇಟಿಯಾಗಿದ್ದರು. ಬಜೆಟ್ ನಂತರ ಸಂಪುಟ‌ ವಿಸ್ತರಣೆ ಮಾಡುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ದೆಹಲಿಯಲ್ಲಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಎಂ.ಟಿ.ಬಿ. ನಾಗರಾಜ್ ಮಾತುಕತೆ ನಡೆಸಿದರು ಎನ್ನಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರು

'ಧರ್ಮೇಂದ್ರ ಪ್ರಧಾನ್ ರನ್ನು ವಜಾ ಮಾಡಿ; ಇಲ್ಲದಿದ್ದರೆ ನಿಮ್ಮ ರಾಜೀನಾಮೆಯನ್ನೂ ಕೇಳುತ್ತೇವೆ': ಪ್ರಧಾನಿ ಮೋದಿಗೆ CJP ಮುಖ್ಯಸ್ಥ Abhijeet Dipke ಒತ್ತಾಯ

ಸೋನಮ್, ಸಹೋದರ ಸಾಕು ನಿಲ್ಲಿಸು; ಪ್ರತಿಭಟನೆ ನಿಲ್ಲಿಸಿ ವಿದ್ಯಾರ್ಥಿಗಳೇ ಮನೆಗೆ ಹೋಗಿ: ಪ್ರಧಾನಿ ನೋಡ್ಕೋತಾರೆ; ಸಲ್ಮಾನ್ ಖಾನ್!

CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು': ಕೊನೆಗೂ ಮೌನ ಮುರಿದ Sachin Tendulkar

KPSC ಪರೀಕ್ಷೆ ಅಕ್ರಮ: 80 ಲಕ್ಷಕ್ಕೆ ಸರ್ಕಾರಿ ಉದ್ಯೋಗ ಫಿಕ್ಸ್; ಎಚ್ಚೆತ್ತ ಕರ್ನಾಟಕ ಗೃಹ ಇಲಾಖೆ!