ನಳೀನ್ ಕುಮಾರ್ ಕಟೀಲ್ 
ರಾಜಕೀಯ

ಸಿಎಎ ವಿರುದ್ಧದ ಪ್ರತಿಭಟನೆಯಲ್ಲಿ ಉಗ್ರ ಸಂಘಟನೆಗಳು: ನೈಜ ಮುಸ್ಲಿಂರು ತೊಡಗಿಸಿಕೊಂಡಿಲ್ಲ- ಕಟೀಲ್ 

ದೇಶಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ವಿರುದ್ಧದ ಪ್ರತಿಭಟನೆಯಲ್ಲಿ ಉಗ್ರ ಸಂಘಟನೆಗಳು ಭಾಗಿಯಾಗಿದ್ದು, ನೈಜ ಮುಸ್ಲಿಂರು  ತೊಡಗಿಸಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಮಂಗಳೂರು: ದೇಶಾದ್ಯಂತ ನಡೆಯುತ್ತಿರುವ ಪೌರತ್ವ ತಿದ್ದುಪಡಿ ವಿರುದ್ಧದ ಪ್ರತಿಭಟನೆಯಲ್ಲಿ ಉಗ್ರ ಸಂಘಟನೆಗಳು ಭಾಗಿಯಾಗಿದ್ದು, ನೈಜ ಮುಸ್ಲಿಂರು  ತೊಡಗಿಸಿಕೊಂಡಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ನಿಜವಾದ ಮುಸ್ಲಿಂರು ಪ್ರತಿಭಟನೆಯಲ್ಲಿ ತೊಡಗಿಲ್ಲ, ಆದರೆ, ನಕ್ಸಲೀಯರು, ಚಿಂತಕರು, ಹಾಗೂ ಉಗ್ರ ಸಂಘಟನೆಗಳು ಪ್ರತಿಭಟನೆಯಲ್ಲಿ ತೊಡಗಿವೆ ಎಂದು ಹೇಳಿದರು. 

ದೇಶದಲ್ಲಿ  ಹಿಂಸಾಚಾರ ಉಂಟು ಮಾಡುವ ಉದ್ದೇಶದಿಂದ ಪ್ರತಿಪಕ್ಷಗಳು ಸುಳ್ಳನ್ನು  ಹಬ್ಬುತ್ತಿವೆ. ಕಳೆದ ಆರು ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಆಡಳಿತ ವಿರುದ್ಧ ಪ್ರತಿಭಟಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯಗಳಿಲ್ಲ. ಅದಕ್ಕಾಗಿ ಅವರು ಕಾಯುತ್ತಾ ಕುಳಿತಿದ್ದಾರೆ. ಸಂವಿಧಾನದ 370ನೇ ವಿಧಿ ರದ್ದತಿ, ರಾಮಜನ್ಮಭೂಮಿ ವಿಷಯಗಳು ಹಿಂದೂ ಮುಸ್ಲಿಂರ ನಡುವೆ ಹಿಂಸಾಚಾರಕ್ಕೆ ಕಾರಣವಾಗುತ್ತದೆ ಎಂದುಕೊಂಡಿದ್ದರು. ಆದರೆ, ಅವುಗಳು ಯಾವುದೇ ಅಸ್ತ್ರವಾಗದಿದ್ದಾಗ ಸಿಎಎನ್ನು ತೆಗೆದುಕೊಂಡಿದ್ದಾರೆ ಎಂದು ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದರು. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT