ಸೋಮಶೇಖರ್ ರೆಡ್ಡಿ 
ರಾಜಕೀಯ

'ನೀವು ಹತ್ತು ಮಕ್ಕಳನ್ನು ಹೆತ್ತರೇ, ನಾವು ಒಬ್ಬೊಬ್ಬರು 50 ಮಕ್ಕಳನ್ನು ಹುಟ್ಟಿಸುತ್ತೇವೆ'

ನೀವು 20-30 ಮಕ್ಕಳನ್ನು ಹುಟ್ಟಿಸಿದರೇ ನಾವು  ಒಬ್ಬೊಬ್ಬರು 50 ಜನರನ್ನು ಹುಟ್ಟಿಸಿ ಜನಸಂಖ್ಯೆ ಹೆಚ್ಚಿಸುತ್ತೇವೆ’ ಎಂದು ಹೇಳುವ ಮೂಲಕ ಶಾಸಕ ಸೋಮಶೇಖರ ರೆಡ್ಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಬಳ್ಳಾರಿ: ನೀವು 20-30 ಮಕ್ಕಳನ್ನು ಹುಟ್ಟಿಸಿದರೇ ನಾವು  ಒಬ್ಬೊಬ್ಬರು 50 ಜನರನ್ನು ಹುಟ್ಟಿಸಿ ಜನಸಂಖ್ಯೆ ಹೆಚ್ಚಿಸುತ್ತೇವೆ’ ಎಂದು ಹೇಳುವ ಮೂಲಕ ಶಾಸಕ ಸೋಮಶೇಖರ ರೆಡ್ಡಿ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ಬೆಂಬಲಿಸಿ ಶುಕ್ರವಾರ ನಗರದಲ್ಲಿ ನಡೆದ ರ್‍ಯಾಲಿ ಉದ್ದೇಶಿಸಿ ಮಾತನಾಡಿದ ಅವರು, ‘ದೇಶದ ಭದ್ರತೆಗೆ ಪೌರತ್ವ ತಿದ್ದುಪಡಿ ಕಾಯ್ದೆ ತರಲಾಗಿದ್ದು, ಅದನ್ನು ಎಲ್ಲರೂ ಬೆಂಬಲಿಸಬೇಕು. ಕಾಯ್ದೆ ವಿರೋಧಿಸಿ ಮತ್ತೊಂದು ಸಲ ಬಳ್ಳಾರಿಯಲ್ಲಿ ಪ್ರತಿಭಟನೆ ನಡೆಸಿದರೆ ನಾವು ಸುಮ್ಮನೆ ಕೂರಲ್ಲ. ದೇಶದಿಂದ ಹೊರಗೆ ಹಾಕುತ್ತಾರೆ ಎಂಬ ಭಯವಿದ್ದವರು ದೇಶಬಿಟ್ಟು ಹೋಗಬೇಕು. ಇಂದಿನ ರ್‍ಯಾಲಿಯಲ್ಲಿ ಶೇ 5ರಷ್ಟು ಜನ ಬಂದಿದ್ದಾರಷ್ಟೆ. ಜಾಸ್ತಿ ನಕ್ರಾ ಮಾಡಿದರೆ ಇನ್ನುಳಿದ ಶೇ 95ರಷ್ಟು ಜನ ಬರುತ್ತಾರೆ. ಆಗ ಕಾಯ್ದೆ ವಿರೋಧಿಸುವವರು ಯಾರೂ ಉಳಿಯುವುದಿಲ್ಲ’ ಎಂದು ಅವರು ಹೇಳಿದರು.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ದ ಹೋರಾಟ ಮಾಡಿದ ಎಲ್ಲರನ್ನೂ ಶೂಟ್ ಮಾಡಿದ್ದರೆ ಅನುಕೂಲ ಆಗಿರೋದು. ದೇಶದ ಜನಸಂಖ್ಯೆಯಾದರೂ ಕಡಿಮೆಯಾಗುತ್ತಿತ್ತು. ‘ನಮ್ಮ ದೇಶದಲ್ಲಿ ಇರಬೇಕೆಂದರೆ ನಾವು ಹೇಳಿದಂತೆ ಕೇಳಬೇಕು. ಇಲ್ಲದಿದ್ದರೆ ಪರಿಸ್ಥಿತಿ ಬೇರೆಯೇ ಆಗುತ್ತೆ. ಹಿಂದೂಗಳನ್ನು ಕೆಣಕಬೇಡಿ’ ಎಂದು ಶಾಸಕ ಜಿ. ಸೋಮಶೇಖರ ರೆಡ್ಡಿ ಎಚ್ಚರಿಕೆ ನೀಡಿದರು.

ಈ ಸೋಮಶೇಖರ ರೆಡ್ಡಿ ಭಯಂಕರ ದೇಶಭಕ್ತ. ನಾನು ಸತ್ತ ಮೇಲೆ ನನ್ನ ಶವ ಕೂಡ ‘ಭಾರತ್‌ ಮಾತಾಕೀ ಜೈ’ ಎಂದು ಹೇಳುತ್ತೆ. ನಿಮ್ಮಂತೆ ನಾವು ಕಳ್ಳ ಭಕ್ತರಲ್ಲ. ನಿಜವಾದ ಭಕ್ತರು. ನಮಗಾದರೆ ಫ್ಯಾಮಿಲಿ ಪ್ಲ್ಯಾನಿಂಗ್‌. ಅನಕ್ಷರಸ್ಥರು ಸಿಎಎ ಬಗ್ಗೆ ಅನಕ್ಷರಸ್ಥರಿಗೆ ತಪ್ಪು ತಿಳುವಳಿಕೆ ನೀಡುತ್ತಿದ್ದಾರೆ ಎಂದು ಟೀಕಿಸಿದ್ದಾರೆ. 

ಇನ್ನೂ ಸಿಎಎ ವಿರೋಧಿಸಿ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿತತ್ತು, ಪ್ರತಿಭಟನೆಯಲ್ಲಿ  ಪಾಲ್ಗೊಂಡಿದ್ದ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಹರಿಹಾಯ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT