ಡಾ.ಅಶ್ವಥ್ ನಾರಾಯಣ 
ರಾಜಕೀಯ

ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ- ಅಶ್ವಥ್ ನಾರಾಯಣ್

ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. 

ಬೆಂಗಳೂರು: ಅಸುರಕ್ಷತೆಯಿಂದ ಯಾವೊಬ್ಬ ಅಲ್ಪಸಂಖ್ಯಾತರು ಭಾರತದಿಂದ ವಲಸೆ ಹೋಗಿಲ್ಲ ಎಂದು ಉಪಮುಖ್ಯಮಂತ್ರಿ ಡಾ ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. 

ಪೌರತ್ವ ತಿದ್ದುಪಡಿ ಕಾಯ್ದೆ ಕುರಿತಂತೆ ಜನಜಾಗೃತಿ ಮೂಡಿಸಲು ಬಿಜೆಪಿ ಹಮ್ಮಿಕೊಂಡಿರುವ ಅಭಿಯಾನದ ಅಂಗವಾಗಿ ಭಾನುವಾರ ಬೆಂಗಳೂರಿನಲ್ಲಿ ಮನೆ-ಮನೆಗೆ ತೆರಳಿ ಜನರನ್ನು ಸಂಪರ್ಕಿಸಿದ ಅವರು, ಕಾಯ್ದೆ ಕುರಿತಂತೆ ಜನರಲ್ಲಿ ಬಿಂಬಿಸಲಾಗಿರುವ ತಪ್ಪು ಮಾಹಿತಿಯನ್ನು ದೂರ ಮಾಡುವುದಕ್ಕಾಗಿ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಮಾನವೀಯತೆಯ ಕಾಯ್ದೆಗೆ ಕಾಂಗ್ರೆಸ್ ಸೇರಿದಂತೆ ಕೆಲ ಶಕ್ತಿಗಳು ಕೋಮು ಬಣ್ಣ ಹಚ್ಚಲು ಯತ್ನಿಸುತ್ತಿರುವುದು ದುರದೃಷ್ಟಕರ ಎಂದರು.

ನೆರೆಯ ರಾಷ್ಟ್ರಗಳಲ್ಲಿ ಚಿತ್ರಹಿಂಸೆ ಅನುಭವಿಸಿ ಇಲ್ಲಿಗೆ ಬಂದ ಅಲ್ಲಿನ ಅಲ್ಪಸಂಖ್ಯಾತರಿಗೆ ಪೌರತ್ವ ಕಲ್ಪಿಸಲು ಈ ಕಾಯ್ದೆ ಜಾರಿಗೆ ತರಲಾಗಿದೆ. ಭಾರತದಿಂದ ಯಾವೊಬ್ಬ ಅಲ್ಪಸಂಖ್ಯಾತರೂ ಅಸುರಕ್ಷತೆ ಭಾವನೆಯಿಂದ ಬೇರೆ ದೇಶಕ್ಕೆ ಈ ರೀತಿ ವಲಸೆ ಹೋಗಿಲ್ಲ. ಭಾರತದಲ್ಲಿ ಅಲ್ಪಸಂಖ್ಯಾತರು ಸುರಕ್ಷಿತರಾಗಿದ್ದಾರೆ. ಇದನ್ನು ಅಲ್ಪಸಂಖ್ಯಾತರು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದರು.

ಅಭಿಯಾನದ ಅಂಗವಾಗಿ ಅವರು ಜ್ಞಾನಪೀಠ ಪುರಸ್ಕೃತ ಸಾಹಿತಿ  ಡಾ.ಚಂದ್ರಶೇಖರ ಕಂಬಾರ ಅವರ ಮನೆಗೆ ಭೇಟಿ ನೀಡಿ ಸಂವಾದ ನಡೆಸಿದರು. ಬಳಿಕ ಪ್ರದೇಶ ಹೋಟೆಲ್ ಮಾಲೀಕರ ಸಂಘದ ಅಧ್ಯಕ್ಷರಾದ ಚಂದ್ರಶೇಖರ್ ಹೆಬ್ಬಾರ್, ಹಿರಿಯ ಚಲನಚಿತ್ರ ನಟಿಯರಾದ ಗಿರಿಜಾ ಲೋಕೇಶ್ , ವೈದ್ಯ ರುದ್ರೇಶ್ ರವರ ಮನೆಗೆ ಭೇಟಿ ನೀಡಿ, ಕಾಯ್ದೆಯಲ್ಲಿನ ಅಂಶಗಳ ಬಗ್ಗೆ ವಿವರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT