ಜಮೀರ್ ಅಹ್ಮದ್ ಖಾನ್ 
ರಾಜಕೀಯ

ಖಡ್ಗ ತರ್ತಾನೋ ಏನು ತರ್ತಾನೋ ನೋಡ್ತೀನಿ: ಸೋಮಶೇಖರ್ ರೆಡ್ಡಿಗೆ ಜಮೀರ್ ಪಂಥಾಹ್ವಾನ 

ನೀ ಎಲ್ಲಿಯವನು ಸೋಮಶೇಖರ್ ರೆಡ್ಡಿ? ಆಂಧ್ರದಿಂದ ಬಂದು ಇಲ್ಲಿ ರಾಜಕೀಯ ಮಾಡುತ್ತಿದ್ದೀಯಾ, ಖಡ್ಗ ತರ್ತಿಯೋ ಏನ್ ತರ್ತಿಯೋ ನೋಡ್ತೀನಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಶಾಸಕ ಸೋಮಶೇಖರ್ ರೆಡ್ಡಿಗೆ  ತಿರುಗೇಟು ನೀಡಿದ್ದಾರೆ. 

ಬೆಂಗಳೂರು: ನೀ ಎಲ್ಲಿಯವನು ಸೋಮಶೇಖರ್ ರೆಡ್ಡಿ? ಆಂಧ್ರದಿಂದ ಬಂದು ಇಲ್ಲಿ ರಾಜಕೀಯ ಮಾಡುತ್ತಿದ್ದೀಯಾ, ಖಡ್ಗ ತರ್ತಿಯೋ ಏನ್ ತರ್ತಿಯೋ ನೋಡ್ತೀನಿ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಶಾಸಕ ಸೋಮಶೇಖರ್ ರೆಡ್ಡಿಗೆ  ತಿರುಗೇಟು ನೀಡಿದ್ದಾರೆ. 

ಬೆಂಗಳೂರಿನಲ್ಲಿ ಮಾತನಾಡಿದ ಜಮೀರ್ ಅಹ್ಮದ್, ಅಲ್ಪಸಂಖ್ಯಾತ ಮುಸಲ್ಮಾನರ ಮೇಲೆ ಬಹುಸಂಖ್ಯಾತ ಹಿಂದೂಗಳು ಕತ್ತಿ  ಝಳಪಿಸಬೇಕೆಂದು ಹೇಳಿಕೆ ನೀಡಿರುವ ಬಿಜೆಪಿ ಶಾಸಕ ಸೋಮಶೇಖರ ರೆಡ್ಡಿ ವಿರುದ್ಧ ಹರಿಹಾಯ್ದಿದ್ದಾರೆ.

ಬಳ್ಳಾರಿಗೆ  ಬರುತ್ತೇನೆ ಏನು ಮಾಡಿತ್ತಿಯೋ ನೋಡುತ್ತೇನೆ ಎಂದು ಪಂಥಾಹ್ವಾನ ನೀಡಿದ್ದಾರೆ.  " ಮಿಸ್ಟರ್ ಸೋಮಶೇಖರ್ ರೆಡ್ಡಿ I Am Coming to bellary"  . ಮುಂದಿನ ಸೋಮವಾರ ಸೋಮಶೇಖರ್ ಮನೆ ಮುಂದೆ ಧರಣಿ ನಡೆಸುತ್ತೇವೆ. ರೆಡ್ಡಿ ಯಾವ ರೀತಿಯ ಖಡ್ಗ ತರುತ್ತಾನೆಯೋ  ನೋಡುತ್ತೇವೆ ಎಂದು ಏಕವಚನದಲ್ಲಿ ವಾಗ್ದಾಳಿ ನಡೆಸಿದರು.

ಪ್ರಚೋದನಕಾರಿ ಹೇಳಿಕೆ  ನೀಡಿರುವ ರೆಡ್ಡಿಯನ್ನು ಮುಂದಿನ ಸೋಮವಾರದ ಒಳಗಾಗಿ ಪೊಲೀಸರು ಬಂಧಿಸಬೇಕು. ಇಲ್ಲದಿದ್ದಲ್ಲಿ ಅವರ ಮನೆ ಮುಂದೆ ಪ್ರತಿಭಟನೆ ಮಾಡುತ್ತೇನೆ. ರೆಡ್ಡಿ ಉಫ್  ಎಂದು ಊದಿದ ಮಾತ್ರಕ್ಕೆ ಮುಸ್ಲಿಮರು ಹಾರಿಹೋಗುವುದಿಲ್ಲ. ಮೊದಲು ರೆಡ್ಡಿ ನನ್ನನ್ನು ಊದಿ  ತೋರಿಸಲಿ ಎಂದು ಜಮೀರ್ ಸವಾಲು ಹಾಕಿದರು.

ಮೊದಲು ಹೇಳಿಕೆ ಕೊಟ್ಟು ನಂತರ ಆ ರೀತಿ  ಹೇಳಿಕೆ ನೀಡಿಲ್ಲ ಎನ್ನುವ ಸೋಮಶೇಖರ್ ಗೆ ಮಾನ ಮರ್ಯಾದೆ ಇಲ್ಲವೇ ಇಲ್ಲ. ಶಾಂತಿಯುತವಾಗಿ  ಮುಸಲ್ಮಾನ ಬಾಂಧವರು ಕಾಯಿದೆಯನ್ನು ವಿರೋಧಿಸಿದ್ದೇವೆ. ನಾವು ಕೈಗೆ ಖಡ್ಗ  ತೆಗೆದುಕೊಳ್ಳುತ್ತೇವೆ ಎನ್ನಲಿಲ್ಲ. ಆದರೆ‌ ಸೋಮಶೇಖರ್ ರೆಡ್ಡಿ ಹಿಂಸೆಯನ್ನು  ಪ್ರಚೋದಿಸಿದ್ದಾರೆ. ಆಂಧ್ರದಿಂದ ಬಂದು ಇಲ್ಲಿ ರಾಜಕೀಯ ಮಾಡುತ್ತಿರುವ ಸೋಮಶೇಖರ್‌ ಪಡೆದಿರುವುದು ಕೇವಲ 70 ಸಾವಿರ ಮತ. ಅವರ ಕ್ಷೇತ್ರದಲ್ಲೂ ಎರಡು ಲಕ್ಷಕ್ಕೂ ಹೆಚ್ಚು ಮತದಾರರಿದ್ದಾರೆ. ಎಲ್ಲರೂ ಅವರ ಪರವಾಗಿ ಇಲ್ಲ ಎಂಬುದು ಇದರಿಂದಲೇ ತಿಳಿಯುತ್ತದೆ. ಕೂಡಲೇ ಪೊಲೀಸರು ಅವರನ್ನು ಬಂಧಿಸಲೇಬೇಕು ಎಂದು ಆಗ್ರಹಿಸಿದರು.

ದೇಶದಲ್ಲಿ  ಹಿಂದೂ ಮುಸಲ್ಮಾನರು ಅಣ್ಣ ತಮ್ಮಂದಿರಂತೆ ಇದ್ದಾರೆ. ನಮ್ಮ‌ಸಾಮರಸ್ಯಕ್ಕೆ ರೆಡ್ಡಿ ಅಂತವರು  ಬೆಂಕಿ ಇಡುತ್ತಿದ್ದಾರೆ. ಹೇಡಿಯಾಗಿರಲು ನಾವೇನು ಕೈಗೆ ಬಳೆ  ತೊಟ್ಟುಕೊಂಡಿಲ್ಲ. ಬಳ್ಳಾರಿಗೆ ಬರುತ್ತೇನೆ ಏನು ಮಾಡುತ್ತೀಯೋ ಮಾಡು ಎಂದು ಎದೆತಟ್ಟಿ  ಸವಾಲು ಹಾಕಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT