ಸಿದ್ದರಾಮಯ್ಯ 
ರಾಜಕೀಯ

ಕರ್ನಾಟಕದಲ್ಲಿ ಹಿಟ್ಲರ್ ಆಡಳಿತಕ್ಕೆ ಅವಕಾಶ ಕೊಡಲ್ಲ: ವಿದ್ಯಾರ್ಥಿಗಳ ಮೇಲಿನ ದಾಳಿಗೆ ಸಿದ್ದರಾಮಯ್ಯ ಕಿಡಿ

ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ.

ಬೆಂಗಳೂರು: ಶಿಕ್ಷಣ ಸಂಸ್ಥೆಗಳು ಜ್ಞಾನದ ಪ್ರಸಾರ ಕೇಂದ್ರಗಳು, ವಿಮರ್ಶಾತ್ಮಕ ಚಿಂತನೆ ಮತ್ತು ವೈಜ್ಞಾನಿಕ ಮನೋಭಾವದ ಮೂಲವಾಗಿದೆ. 

ಬಿಜೆಪಿಯ ಸಿದ್ಧಾಂತವು ಫ್ಯಾಸಿಸಂನ ದುರ್ಬಲ ಅಡಿಪಾಯದಲ್ಲಿದೆ. ನಮ್ಮ ವಿಶ್ವವಿದ್ಯಾಲಯಗಳ ಜ್ಞಾನದ ನೆಲೆಯಿಂದ ಬಿಜೆಪಿಗೆ ಬೆದರಿಕೆ ಇದೆ. ಆದ್ದರಿಂದ ಅವುಗಳನ್ನು ಮಟ್ಟಹಾಕಲು ಮತ್ತು ದುರ್ಬಲಗೊಳಿಸಲು ಅವರು ಬಯಸುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬಿಜೆಪಿಯ ಗೂಂಡಾಗಳು ಬೆಂಗಳೂರಿನ ಜ್ಯೋತಿನಿವಾಸ್ ಕಾಲೇಜಿನ ವಿದ್ಯಾರ್ಥಿಗಳಿಗೆ ಸಿಎಎಗೆ ಬೆಂಬಲ ನೀಡುವಂತೆ ಬೆದರಿಕೆ ಹಾಕುತ್ತಿದ್ದಾರೆ. ಯಡಿಯೂರಪ್ಪ ಅವರೇ, ನಿಮ್ಮ ಪಕ್ಷದ ಗೂಂಡಾಗಿರಿಗಳನ್ನು ನಿಯಂತ್ರಿಸಲು ನಾನು ನಿಮಗೆ ಒತ್ತಾಯಿಸುತ್ತಿದ್ದೇನೆ. ನಿಮ್ಮ ಸ್ವಾರ್ಥ ಉದ್ದೇಶಗಳಿಗಾಗಿ ಜ್ಞಾನ ಮತ್ತು ಶಿಕ್ಷಣ ಸಂಸ್ಥೆಗಳನ್ನು ಮಟ್ಟಹಾಕಬೇಡಿ. ಕರ್ನಾಟಕದಲ್ಲಿ ನಿಮ್ಮ ಹಿಟ್ಲರ್ ಆಡಳಿತಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT