ಎಂ. ಬಿ. ಪಾಟೀಲ್ 
ರಾಜಕೀಯ

ಲಿಂಗಾಯತ ಸಮುದಾಯಕ್ಕೆ ಪ್ರಾಧ್ಯಾನ್ಯತೆ ಮೇರೆಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಲಿ- ಎಂ. ಬಿ. ಪಾಟೀಲ್

ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಬಳಿಕ‌ ಕಾಂಗ್ರೆಸ್‌ನಿಂದ  ದೂರವಾಗಿರುವ ಲಿಂಗಾಯತ ಸಮುದಾಯದ ಬೆಂಬಲ ಮತ್ತೆ ಮರುಗಳಿಸಲು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸ್ಥಾನದ ಮೇಲೆ ಕಣ್ಣಿಟ್ಟಿರುವ  ಮಾಜಿ ಸಚಿವ ಎಂ.ಬಿ.ಪಾಟೀಲ್ ಪರೋಕ್ಷವಾಗಿ ಮನದಿಂಗಿತ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು:  ಮಾಜಿ ಮುಖ್ಯಮಂತ್ರಿ ವೀರೇಂದ್ರ ಪಾಟೀಲರ ಬಳಿಕ‌ ಕಾಂಗ್ರೆಸ್‌ನಿಂದ  ದೂರವಾಗಿರುವ ಲಿಂಗಾಯತ ಸಮುದಾಯದ ಬೆಂಬಲ ಮತ್ತೆ ಮರುಗಳಿಸಲು ಲಿಂಗಾಯತ ಸಮುದಾಯದ ಅಭ್ಯರ್ಥಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಸ್ಥಾನದ ಮೇಲೆ ಕಣ್ಣಿಟ್ಟಿರುವ  ಮಾಜಿ ಸಚಿವ ಎಂ.ಬಿ.ಪಾಟೀಲ್ ಪರೋಕ್ಷವಾಗಿ ಮನದಿಂಗಿತ ವ್ಯಕ್ತಪಡಿಸಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲಿಂಗಾಯತ ಸಮುದಾಯದಂತೆ ಅನೇಕ ಸಮುದಾಯಗಳು ಕಾಂಗ್ರೆಸ್ ನಿಂದ ದೂರವಾಗಿವೆ. ರಾಜ್ಯದಲ್ಲಿ  ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲ ಸಮುದಾಯಗಳ ವಿಶ್ವಾಸ ಪಡೆಯುವುದು  ಅಗತ್ಯವಿದೆ. ಹೀಗಾಗಿ ಕೆಪಿಸಿಸಿ ಸಾರಥ್ಯ ನೇಮಕ ಯಾವ ರೀತಿಯಲ್ಲಿ ನಡೆದರೆ ಪಕ್ಷಕ್ಕೆ  ಅನುಕೂಲವಾಗಲಿದೆ ಎಂಬ ಬಗ್ಗೆ  ಎಐಸಿಸಿ ನಾಯಕಿ ಸೋನಿಯಾ ಗಾಂಧಿಯವರಿಗೆ ಸಲಹೆ ನೀಡಲಾಗಿದೆ.  ನನ್ನನ್ನೇ ಆಯ್ಕೆ ಮಾಡಿ ಎಂದು ಎಂದಿಗೂ ಲಾಬಿ ಮಾಡಿಲ್ಲ ಎಂದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಿದ್ದರಾಮಯ್ಯ ತಮ್ಮ ಪರವಾಗಿಯೋ ಮತ್ತಿನ್ಯಾರ ಪರವಾಗಿಯೋ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆಂಬುದು ಗೊತ್ತಿಲ್ಲ. ಸಿದ್ದರಾಮಯ್ಯ ಅವರಿಲ್ಲದ ಕಾಂಗ್ರೆಸ್‌ಗೆ ಕಷ್ಟ ಕಟ್ಟಿಟ್ಟ ಬುತ್ತಿ. ಸದ್ಯಕ್ಕೆ ಅವರನ್ನು ಬಿಟ್ಟು ಪಕ್ಷ ಕಟ್ಟುವುದು ಕಷ್ಟ ಎಂದು ಅವರು ಹೇಳಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT