ಯಡಿಯೂರಪ್ಪ 
ರಾಜಕೀಯ

ಸಿಎಂ ವಿದೇಶ ಪ್ರವಾಸ ರದ್ದು: ಮುಂದಿನ ವಾರ ಸಂಪುಟ ವಿಸ್ತರಣೆ?

ದಾವೋಸ್‌ ಪ್ರವಾಸ ರದ್ದುಗೊಳಿಸಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯಲಿದೆ ಎಂದು ಹೇಳಲಾಗಿದೆ.  ಜನವರಿ 18 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಲಿದ್ದು  ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಬೆಂಗಳೂರು: ದಾವೋಸ್‌ ಪ್ರವಾಸ ರದ್ದುಗೊಳಿಸಿರುವ ಸಿಎಂ ಬಿ.ಎಸ್‌.ಯಡಿಯೂರಪ್ಪ ಸಂಪುಟ ವಿಸ್ತರಣೆ ಮುಂದಿನ ವಾರ ನಡೆಯಲಿದೆ ಎಂದು ಹೇಳಲಾಗಿದೆ.  ಜನವರಿ 18 ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹುಬ್ಬಳ್ಳಿಗೆ ಆಗಮಿಸಲಿದ್ದು  ಅದಕ್ಕೂ ಮುನ್ನವೇ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಲಾಗುತ್ತಿದೆ.

ಜನವರಿ 15 ರಂದು ಮಕರ ಸಂಕ್ರಾಂತಿ ಇದ್ದು ಧನುರ್ಮಾಸ ಮುಗಿಯಲಿದೆ ಹೀಗಾಗಿ  17 ಅಥವಾ 18ರಂದು ನೂತನ ಸಚಿವರ ಪ್ರಮಾಣವಚನಕ್ಕೆ ಮುಹೂರ್ತ ನಿಗದಿಯಾಗಲಿದೆ. ಸಿಎಎ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಹುಬ್ಬಳ್ಳಿಯಲ್ಲಿ ನಡೆಯುವ ರ್ಯಾಲಿಯಲ್ಲಿ ಅಮಿತ್ ಶಾ ಪಾಲ್ಗೋಳ್ಳಲಿದ್ದಾರೆ ಎಂದು ಪಕ್ಷದ ವಕ್ತಾರ ಜಿ.ಮಧುಸೂದನ್ ತಿಳಿಸಿದ್ದಾರೆ.

ಸಂಪುಟ ವಿಸ್ತರಣೆ ಬಗ್ಗೆ ಸಮಾಲೋಚಿಸಿ ಸಮ್ಮತಿ ಪಡೆಯಲಾಗುವುದು. ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ. ಹೆಚ್ಚುವರಿ ನೆರೆ ಪರಿಹಾರಕ್ಕೆ ಬೇಡಿಕೆ ಸಲ್ಲಿಸುವುದು, ರಾಜ್ಯದ ಯೋಜನೆಗಳಿಗೆ ನೆರವು ಕೇಳುವುದೂ ಸಿಎಂ ಅವರ ಈ ಪ್ರವಾಸದ ಕಾರ್ಯಸೂಚಿಯಲ್ಲಿಇರಲಿದೆ.

ಸಣ್ಣ ಪ್ರಮಾಣದ ಸಂಪುಟ ಪುನಾರಚನೆಯ ಚರ್ಚೆ ನಡೆಯುತ್ತಿದ್ದರೂ ಸರಕಾರ ರಚನೆಯಾಗಿ 6 ತಿಂಗಳೂ ಆಗಿಲ್ಲ. ಹಾಗಾಗಿ ಯಾರಿಗೂ ಕೊಕ್‌ ನೀಡುವುದು ಬೇಡವೆಂಬ ನಿಲುವಿಗೆ ಬಂದಿರುವ ಸಿಎಂ ಬಿಎಸ್‌ವೈ, ಹೊಸ ಶಾಸಕರಿಗೆ ಮಂತ್ರಿಮಂಡಲದಲ್ಲಿ ಸ್ಥಾನ ನೀಡಲಿದ್ದಾರೆ.

ಹೊಸಬರಲ್ಲಿ 11 ಮಂದಿ ಮಂತ್ರಿಗಳಾಗಲಿದ್ದಾರೆ. ಮೂಲ ಬಿಜೆಪಿಯ ಶಾಸಕರಲ್ಲೂ 2-3 ಮಂದಿಗೆ ಅವಕಾಶ ನಿರೀಕ್ಷಿಸಲಾಗಿದೆ. ಬಿಎಸ್‌ವೈ ಸಂಪುಟದಲ್ಲಿ 16 ಸ್ಥಾನಗಳು ಖಾಲಿಯಿದ್ದು, ಈ ಪೈಕಿ 14 ಸ್ಥಾನ ಭರ್ತಿ ಮಾಡುವ ಯೋಚನೆಯಿದೆ. 2 ಸ್ಥಾನಗಳನ್ನು ಹಾಗೆಯೇ ಉಳಿಸಿಕೊಳ್ಳುವ ಸಾಧ್ಯತೆಯಿದೆ. ಈ ನಡುವೆಯೂ ದಿಲ್ಲಿಯ ಸಭೆಯಲ್ಲಿ ಕೈಗೊಳ್ಳುವ ತೀರ್ಮಾನ ಆಧರಿಸಿ ಸಂಪುಟದಲ್ಲಿ ಬದಲಾವಣೆಯೂ ಆಗಬಹುದು ಎನ್ನಲಾಗುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT