ಡಿಕೆ ಶಿವಕುಮಾರ್ 
ರಾಜಕೀಯ

ಬಿಜೆಪಿಯಿಂದ ಕನಕಪುರ ಚಲೋ: ಉದ್ವೇಗಕ್ಕೊಳಗಾಗದಂತೆ ಡಿ.ಕೆ. ಶಿವಕುಮಾರ್ ಮನವಿ

ಕಪಾಲಿಬೆಟ್ಟದಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ನಿರ್ಮಿಸಲು ಉದ್ದೇಶಿಸಿದ್ದ ಏಸುಪ್ರತಿಮೆ ನಿರ್ಮಾಣ ಖಂಡಿಸಿ ಜ.13ರ ಸೋಮವಾರದಂದು ಬಿಜೆಪಿ "ಕನಕಪುರ ಚಲೋ" ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ

ಬೆಂಗಳೂರು: ಕಪಾಲಿಬೆಟ್ಟದಲ್ಲಿ ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ನಿರ್ಮಿಸಲು ಉದ್ದೇಶಿಸಿದ್ದ ಏಸುಪ್ರತಿಮೆ ನಿರ್ಮಾಣ ಖಂಡಿಸಿ ಜ.13ರ ಸೋಮವಾರದಂದು ಬಿಜೆಪಿ "ಕನಕಪುರ ಚಲೋ" ಹೆಸರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ.ಇದರಲ್ಲಿ ಬಿಜೆಪಿ ಕಾರ್ಯಕರ್ತರು,ಮುಖಂಡರು ಹಾಗೂ ಕೆಲ ಮಠಾಧೀಶರು ಪಾಲ್ಗೊಳ್ಳಲಿದ್ದಾರೆ

 ಬಿಜೆಪಿ ಕನಕಪುರ ಚಲೋ ಖಂಡಿಸಿ ಮಾತನಾಡಿದ ಡಿ.ಕೆ.ಶಿವಕುಮಾರ್, ಕನಕಪುರಕ್ಕೆ ಕೆಟ್ಟ ಹೆಸರು ತರಲೆಂದೇ ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಹೀಗಾಗಿ  ಕನಕಪುರ ಮತ್ತು ರಾಮನಗರದ ಜನತೆ ಪಕ್ಷದ ಕಾರ್ಯಕರ್ತರು ಯಾವುದೇ ಉದ್ವೇಗಕ್ಕೊಳಗಾಗದೇ ಶಾಂತಿ‌ ಕಾಪಾಡಬೇಕು ಎಂದು ಮನವಿ ಮಾಡಿದ್ದಾರೆ.

ಕನಕಪುರದ ಮಹಾಜನರು ಶತ-ಶತಮಾನಗಳಿಂದಲೂ ಶಾಂತಿಪ್ರಿಯರು. ಮತೀಯ ಸಾಮರಸ್ಯಕ್ಕೆ ಹೆಸರಾದವರು. ಕಪಾಲಬೆಟ್ಟದ ಯೇಸುಪ್ರತಿಮೆ ನಿರ್ಮಾಣ ವಿರೋಧಿಸುವ ನೆಪದಲ್ಲಿ ಕೆಲವು ಮತೀಯ ಶಕ್ತಿಗಳು ಪ್ರಯತ್ನಿಸುತ್ತಿವೆ. ಸುಳ್ಳು ಕಾರಣ, ಕಟ್ಟುಕತೆಗಳನ್ನು ಸೃಷ್ಟಿಸುತ್ತಿವೆ, ವದಂತಿಗಳನ್ನು ಹರಡುತ್ತಿವೆ ಎಂದು ಅವರು ಆರೋಪಿಸಿದ್ದಾರೆ.

ಜ 13 ರಂದು ಕನಕಪುರ ಚಲೋ ಹೆಸರಿನಲ್ಲಿ ಕೋಮುಸಾಮರಸ್ಯ ಹಾಳು ಮಾಡಿ, ಗಲಭೆ, ಹಿಂಸಾಚಾರಕ್ಕೆ ಪ್ರೇರಣೆ ನೀಡುವುದು ಈ ಮತೀಯ ಶಕ್ತಿಗಳ ಹುನ್ನಾರವಾಗಿದೆ. ಹೀಗಾಗಿ ಯಾವುದೇ ಸಮುದಾಯವನ್ನು ಬಿಜೆಪಿ ಟೀಕಿಸಿದರೂ ಸಹ ಯಾರೂ ಯಾವುದೇ ಉದ್ವೇಗಕ್ಕೊಳಗಾಗಬಾರದು ಕಿವಿ ಮಾತು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT