ಡಿ.ಕೆ ಶಿವಕುಮಾರ್ 
ರಾಜಕೀಯ

'ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ'

ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.

ಬೆಂಗಳೂರು: ಬಿಜೆಪಿ ಪ್ರತಿಭಟನೆ ಕಂಡು ಗಡಗಡ ನಡುಗುತ್ತಿದ್ದೇನೆ ಎನ್ನುವ ಮೂಲಕ ಏಸು ಪ್ರತಿಮೆ ನಿರ್ಮಾಣ ವಿರೋಧಿಸಿ ಹಮ್ಮಿಕೊಂಡ ಕನಕಪುರ ಚಲೋ ಬಗ್ಗೆ ಮಾಜಿ ಸಚಿವ ಡಿ.ಕೆ ಶಿವಕುಮಾರ್​​ ವ್ಯಂಗ್ಯವಾಡಿದ್ದಾರೆ.

ಸುದ್ದಿಗಾರರ ಜತೆ ಮಾತಾಡಿದ ಡಿಕೆಶಿವಕುಮಾರ್, ನಾನು ಬಿಜೆಪಿ ಪ್ರತಿಭಟನೆಯಿಂದ ನನಗೆ ನಡುಕ ಶುರುವಾಗಿದೆ. ಈಗಲೂ ನಡುಗುತ್ತಿದ್ದೇನೆ. ಅವರಿಗೆ ಹೆದರಿ ಮನೆಯಿಂದ ಹೊರಗಡೆ ಬಂದೆ  ಲೇವಡಿ ಮಾಡಿದ್ದಾರೆ.

ಮಾಗಡಿ ರಸ್ತೆಯಲ್ಲಿ ನಾಡಪ್ರಭು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಕ್ರೈಸ್ತರು 5 ಎಕರೆ ಜಮೀನು ನೀಡಿದ್ದಾರೆ. ರಾಜಕಾರಣ ಮಾಡಬೇಕೆಂದು ಬಿಜೆಪಿಗರು ಹೀಗೆ ಮಾಡುತ್ತಿದ್ದಾರೆ. ಅವರ ಬಳಿ ಅಧಿಕಾರ ಇದೆ ಮಾಡಲಿ. ಎಲ್ಲಿಂದ ಎಷ್ಟು ಜನ ಬಂದಿದ್ದಾರೆ ಎಂಬುದು ನನಗೆ ಗೊತ್ತಿದೆ. ಯಾರು ಜನರನ್ನು ಕರೆಸಿದ್ದಾರೆ ಎನ್ನುವುದು ನನ್ನ ಗಮನಕ್ಕೆ ಬಂದಿದೆ.

ಅವರಿಗೆ ಮಂತ್ರಿಯಾಗಬೇಕು ಎನ್ನುವ ಆಸೆಯಿಂದ ಹೀಗೆ ಮಾಡುತ್ತಿದ್ದಾರೆ ಮಾಡಲಿ ಬಿಡಿ ಎಂದು ಪರೋಕ್ಷವಾಗಿ ಮಾಜಿ ಶಾಸಕ ಸಿ.ಪಿ ಯೋಗೇಶ್ವರ್​​ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT