ಹೆಚ್. ವಿಶ್ವನಾಥ್ 
ರಾಜಕೀಯ

ಯಡಿಯೂರಪ್ಪ ನುಡಿದಂತೆ ನಡೆಯುವಂತ ನಾಯಕ: ಸಂಪುಟದಲ್ಲಿ ಸ್ಥಾನ ಖಚಿತ- ವಿಶ್ವನಾಥ್ 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಾಲಿಗೆ ಮೇಲೆ ನಡೆಯುವಂತ ನಾಯಕ, ಅವರು ಹೇಳಿದ ಹಾಗೆ ನಡೆದುಕೊಳ್ಳಲಿದ್ದಾರೆ ಎಂದು ಮಾಜಿ ಶಾಸಕ  ಹೆಚ್ . ವಿಶ್ವನಾಥ್ ಹೇಳಿದ್ದಾರೆ.

ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಬಂಡಾಯ ಶಾಸಕರಲ್ಲಿ ಒಬ್ಬರಾಗಿದ ವಿಶ್ವನಾಥ್, ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಹೆಚ್. ಪಿ. ಮಂಜುನಾಥ್ ವಿರುದ್ಧ 39 ಸಾವಿರ ಮತಗಳ ಅಂತರದಿಂದ ಸೋತಿದ್ದರು.

ಯಡಿಯೂರಪ್ಪ ನೀಡಿರುವ ಮಾತಿನ ಮೇಲೆ ನನಗೆ ನಂಬಿಕೆ ಇದೆ. ಯಾವುದೇ ರೀತಿಯ ಅನುಮಾನ, ಅಥವಾ ಭಯ ಅಥವಾ ಭೀತಿ ಇಲ್ಲ. ಉಪ ಚುನಾವಣೆಯಲ್ಲಿ ಗೆದ್ದಿರುವ ಎಲ್ಲಾ 17 ಶಾಸಕರನ್ನು ಸಚಿವರನ್ನಾಗಿ ಮಾಡುತ್ತಾರೆ. ಅವರನ್ನು ನಾನು ನಂಬುತ್ತೇನೆ. ನಮ್ಮ ತ್ಯಾಗವಿಲ್ಲದೆ ಬಿಜೆಪಿ ಸರ್ಕಾರ ಹೇಗೆ ರಚನೆಯಾಗಲು ಸಾಧ್ಯವಿತ್ತು ಎಂದು ಪ್ರಶ್ನಿಸಿದರು?

ಜೂನ್ ತಿಂಗಳಲ್ಲಿ ವಿಧಾನಪರಿಷತ್ತಿನಲ್ಲಿ 12 ಸ್ಥಾನಗಳು ಖಾಲಿಯಾಗಲಿದ್ದು, ಎಂಟಿಬಿ ನಾಗರಾಜ್ ಜೊತೆಗೆ ತಮ್ಮನ್ನು ವಿಧಾನಪರಿಷತ್ ಸದಸ್ಯರನ್ನಾಗಿ ಮಾಡುವ ಭರವಸೆ ಇದೆ. ಉಪಚುನಾವಣೆಯಲ್ಲಿ ಗೆಲ್ಲಲಿ ಅಥವಾ ಸೋತಿದ್ದರೂ ಯಡಿಯೂರಪ್ಪ ನೀಡಿದ್ದ ಭರವಸೆಯಂತೆ ನಡೆಯುತ್ತಾರೆ ಎಂಬ ವಿಶ್ವಾಸ ಹೊಂದಿರುವುದಾಗಿ ವಿಶ್ವನಾಥ್ ತಿಳಿಸಿದರು. ವಿಶ್ವನಾಥ್, ನಾಗರಾಜ್ ಹಾಗೂ ಶಂಕರ್ ಕುರುಬ ಸಮುದಾಯಕ್ಕೆ ಸೇರಿದವರಾಗಿದ್ದಾರೆ.

ಚುನಾವಣೆಯಲ್ಲಿ ಸ್ಪರ್ಧಿಸದಂತೆ ಯಡಿಯೂರಪ್ಪ ಹೇಳಿದ್ದರು. ಆದರೆ, ಅವರ ಮಾತು ಫಲಿತಾಂಶದ ನಂತರ ಮನವರಿಕೆಯಾಗಿದೆ. ಯಾವುದೇ ನಿಗಮ ಅಥವಾ ಮಂಡಳಿಯ ಅಧ್ಯಕ್ಷರಾಗಿ ನೇಮಕವಾಗುವುದಿಲ್ಲ, ಸದ್ಯದಲ್ಲಿಯೇ ಸಚಿವರಾಗಿರುವುದಾಗಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಕ್ಕಳ ಸಾವಿಗೆ ಪ್ರತೀಕಾರ: ಇಸ್ರೇಲ್-ಅಮೆರಿಕ, ಗಲ್ಫ್ ದೇಶಗಳ ಮೇಲೆ ದಾಳಿ ನಿಲ್ಲಲ್ಲ; ಇರಾನ್ ಹೊಸ ಸರ್ವೋಚ್ಛ ನಾಯಕ ವಾರ್ನಿಂಗ್!

No shortage of fuel: ಹಾರ್ಮುಜ್ ಜಲಸಂಧಿ ತಲುಪಿಸಬಹುದಾದ ತೈಲಕ್ಕಿಂತ ಹೆಚ್ಚಿನದ್ದು ಬೇರೆಡೆಯಿಂದ ಭಾರತ ತಲುಪಿದೆ; ಪೆಟ್ರೋಲಿಯಂ ಸಚಿವ

ಮಧ್ಯಪ್ರಾಚ್ಯ ಯುದ್ಧಗ್ರಸ್ತ: ತೈಲ, ಅನಿಲ ಪೂರೈಕೆ ವ್ಯತ್ಯಯ ಸಂಕಷ್ಟ; ಆದರೂ ರಹಸ್ಯ'ಭೂಗತ ಗುಹೆ'ಗಳಿಂದ ಭಾರತಕ್ಕೆ No Tension!

ನಮ್ಮ ಶಕ್ತಿ ಇರಾನ್ ನಿರ್ನಾಮಕ್ಕೆ ಮೀಸಲು, ಹಾರ್ಮುಜ್ ಜಲಸಂಧಿಯಲ್ಲಿ ಟ್ಯಾಂಕರ್ ಗಳಿಗೆ ಬೆಂಗಾವಲು ನೀಡಲ್ಲ: ಅಮೆರಿಕ

ಮಾರ್ಚ್ 16 ರಂದು ರಾಜ್ಯದ ಎರಡು ಕ್ಷೇತ್ರಗಳ ಉಪ ಚುನಾವಣೆ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆ ಸಾಧ್ಯತೆ

SCROLL FOR NEXT