ಚಕ್ರವರ್ತಿ ಸೂಲಿಬೆಲೆ-ತೇಜಸ್ವಿ ಸೂರ್ಯ-ಎಚ್ಡಿಕೆ 
ರಾಜಕೀಯ

ಚಕ್ರವರ್ತಿ ಸೂಲಿಬೆಲೆ, ತೇಜಸ್ವಿ ಸೂರ್ಯ ಮಹಾನ್ ದೇಶಭಕ್ತರೇನೂ ಅಲ್ಲ: ಎಚ್ ಡಿ ಕುಮಾರಸ್ವಾಮಿ

ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಹೆಸರು ಬಳಿಯಬಾರದು ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು: ಕಿಡಿಗೇಡಿಗಳ ಕೃತ್ಯಕ್ಕೆ ಧರ್ಮದ ಹೆಸರು ಬಳಿಯಬಾರದು ಎಂದು ಜೆಡಿಎಸ್ ಶಾಸಕಾಂಗ ನಾಯಕ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್‌ಡಿಪಿಐ  ಕಾರ್ಯಕರ್ತರ ಬಂಧನ ಹಾಗೂ ಸರ್ಕಾರದಿಂದ ಎಫ್‌ಡಿಪಿಐ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯಾರೋ ಮಾಡಿದ ಕೃತ್ಯವನ್ನು ಒಂದು ಸಮುದಾಯದ ಮೇಲೆ ಹೇರಬಾರದು. ಸತ್ಯಾಸತ್ಯತೆ ಅರಿತು ಕ್ರಮ ತೆಗೆದುಕೊಳ್ಳಬೇಕು ಎಂದರು‌.

ಯುವ ಬ್ರಿಗೇಡ್‌ ಚಕ್ರವರ್ತಿ ಸೂಲಿಬೆಲೆ, ಸಂಸದ ತೇಜಸ್ವಿ ಸೂರ್ಯ ಇವರು ಮಹಾನ್ ದೇಶಭಕ್ತರೇನೂ ಅಲ್ಲ. ಯುಗಪುರುಷರೂ ಅಲ್ಲ. ಇವರೇನು ಹುತಾತ್ಮರಾಗಲೂ ಹೋಗಿಯೂ ಇಲ್ಲ. ತೇಜಸ್ವಿ ಸೂರ್ಯ ಬೆಂಗಳೂರಿಗೆ ನೀಡಿದ ಕೊಡುಗೆಯಾದರು ಏನು? ಇವರೇನು ಸಾಧನೆ ಮಾಡಿದ್ದಾರೆ ಎಂದು ಇವರ ಕೊಲೆಗೆ ಯತ್ನಿಸುತ್ತಾರೆ. ಯಾರೋ ತಪ್ಪು ಮಾಡಿದ ಮಾತ್ರಕ್ಕೆ ಒಂದು ಸಮುದಾಯದ ಮೇಲೆ ತಪ್ಪು  ಹೊರಿಸಬಾರದು. ತನಿಖೆ ಮಾಡಿ ಸತ್ಯ ಇದ್ದರೆ ಯಾವುದೇ ಸಂಘಟನೆ ಕ್ರಮ ತೆಗೆದುಕೊಳ್ಳಲಿ ಎಂದು ಕುಮಾರಸ್ವಾಮಿ ಆಗ್ರಹಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಇದೆಲ್ಲಾ ನನ್ ಮೇಲೆ ಪರಿಣಾಮ ಬೀರೊಲ್ಲ': ನ್ಯಾಯಾಲಯದಲ್ಲಿ CJI ಮೇಲೆ ಶೂ ಎಸೆದ ವಕೀಲ; Gavai ಪ್ರತಿಕ್ರಿಯೆ

Frances New PM Resigns: ಕ್ಯಾಬಿನೆಟ್ ರಚನೆ ಬೆನ್ನಲ್ಲೆ ಫ್ರಾನ್ಸ್‌ನ ನೂತನ ಪ್ರಧಾನಿ ರಾಜೀನಾಮೆ! ಕಾರಣವೇನು?

ಗಾಜಾದ ಅಂತಿಮ ಭರವಸೆ: ಈಜಿಪ್ಟ್‌ನಲ್ಲಿ ನಡೆಯುವ ಮಾತುಕತೆಗಳು ಯುದ್ಧ ನಿಲ್ಲಿಸಬಹುದೇ? (ಜಾಗತಿಕ ಜಗಲಿ)

ಮತ್ತೊಂದು ಪೈಶಾಚಿಕ ಕೃತ್ಯ: MBBS ವಿದ್ಯಾರ್ಥಿನಿಗೆ ಡ್ರಗ್ಸ್ ನೀಡಿ ಅತ್ಯಾಚಾರ, Video ರೆಕಾರ್ಡ್!

ಸಮಾಜದಲ್ಲಿ ಜ್ಞಾನದ ಬೆಳಕನ್ನು ಬೆಳಗಿಸುವವರು ಬ್ರಾಹ್ಮಣರು: ದೆಹಲಿ ಸಿಎಂ ರೇಖಾ ಗುಪ್ತಾ

SCROLL FOR NEXT