ಸಿದ್ದರಾಮಯ್ಯ, ಜಮೀರ್ ಅಹ್ಮದ್ 
ರಾಜಕೀಯ

ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ಜಮೀರ್ ಅಹ್ಮದ್ ಕೂರಿಸಲು ತಂತ್ರ

ಕೆಪಿಸಿಸಿ‌ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ಒಂದು  ನಿರ್ಣಯಕ್ಕೆ ಬಂದಿದೆ ಎಂದು ಸ್ಪಷ್ಟವಾಗುತ್ತಿರುವ ಬೆನ್ನಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ  ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಬೇಡಿಕೆ ಮುನ್ನಲೆಗೆ ಬಂದಿದೆ.

ಬೆಂಗಳೂರು: ಕೆಪಿಸಿಸಿ‌ ಅಧ್ಯಕ್ಷ ಸ್ಥಾನದ ವಿಚಾರದಲ್ಲಿ ಹೈಕಮಾಂಡ್ ಒಂದು  ನಿರ್ಣಯಕ್ಕೆ ಬಂದಿದೆ ಎಂದು ಸ್ಪಷ್ಟವಾಗುತ್ತಿರುವ ಬೆನ್ನಲ್ಲೆ ಕೆಪಿಸಿಸಿ ಕಾರ್ಯಾಧ್ಯಕ್ಷ  ಹುದ್ದೆಯನ್ನು ಮುಸ್ಲಿಂ ಸಮುದಾಯಕ್ಕೆ ನೀಡಬೇಕೆಂಬ ಬೇಡಿಕೆ ಮುನ್ನಲೆಗೆ ಬಂದಿದೆ.

ಈ ಹುದ್ದೆಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಪ್ತ ಜಮೀರ್ ಅಹ್ಮದ್  ಅವರನ್ನು ನೇಮಿಸುವಂತೆ ಒತ್ತಡ ಕೇಳಿಬಂದಿದೆ. ಆದರೆ ಇದಕ್ಕೆ ಮೂಲ ಕಾಂಗ್ರೆಸಿಗರ ಬಣದ  ಮುಸ್ಲಿಂ ನಾಯಕರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಬೆಂಗಳೂರು ವಿಭಾಗದಲ್ಲಿ ಮೂವರು  ಮುಸ್ಲಿಂ ಶಾಸಕರು,‌ ಇಬ್ಬರು ಮೇಲ್ಮನೆ‌‌ ಸದಸ್ಯರು ಹಾಗೂ ಕೆಪಿಸಿಸಿ ಅಲ್ಪ ಸಂಖ್ಯಾತ  ಘಟಕದ ಅಧ್ಯಕ್ಷ ಸ್ಥಾನ ನೀಡಲಾಗಿದೆ

 ಕೆಪಿಸಿಸಿ ಅಧ್ಯಕ್ಷ‌ ಸ್ಥಾನಕ್ಕೆ  ಡಿ.ಕೆ.ಶಿವಕುಮಾರ್ ಅಖೈರುಗೊಂಡಲ್ಲಿ ಅವರ ವರ್ಚಸನ್ನು ಕಡಿಮೆ ಮಾಡಲೆಂದು ಪಕ್ಷ‌ ಸಂಘಟನೆಯ  ನೆಪದಲ್ಲಿ ವಿಭಾಗವಾರು ಕಾರ್ಯಾಧ್ಯಕ್ಷರನ್ನು ನೇಮಿಸಬೇಕೆಂದು ಸಿದ್ದರಾಮಯ್ಯ  ಹೈಕಮಾಂಡ್‌ಗೆ ಸಲಹೆ ನೀಡಿದ್ದಾರೆ.

 ವಿಭಾಗವಾರು ಕಾರ್ಯಾಧ್ಯಕ್ಷರ ಸ್ಥಾನದಲ್ಲಿ ತಮ್ಮ ಆಪ್ತರನ್ನು ನೇಮಿಸಿಕೊಳ್ಳುವ ಯೋಜನೆಯೂ ಸಿದ್ದರಾಮಯ್ಯದ್ದಾಗಿದೆ. ಆದರೆ ವಿಭಾಗವಾರು  ನೇಮಕಕ್ಕೆ ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ‌.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT