ಎಚ್. ಕೆ. ಪಾಟೀಲ್ , ಸಿದ್ದರಾಮಯ್ಯ 
ರಾಜಕೀಯ

ವಿಭಾಗವಾರು ಕಾರ್ಯಾಧ್ಯಕ್ಷ ಸ್ಥಾನ ಹಂಚಿಕೆ: ಸಿದ್ದು ಪ್ರಸ್ತಾಪಕ್ಕೆ ಎಚ್ ಕೆ ಪಾಟೀಲ್ ವಿರೋಧ

ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೆಪಿಸಿಸಿಯಲ್ಲಿ ವಿಭಾಗವಾರು ನಾಲ್ಕು  ಕಾರ್ಯಾಧ್ಯಕ್ಷ ಸ್ಥಾನ ಸೃಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ  ಮುಖಂಡ. ಎಚ್ ಕೆ ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನಗಳ ಅವಶ್ಯಕತೆ ಇಲ್ಲ ಎಂದು  ಕಡ್ಡಿ ಮುರಿದಂತೆ ಹೇಳಿದ್ದಾರೆ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕೆಪಿಸಿಸಿಯಲ್ಲಿ ವಿಭಾಗವಾರು ನಾಲ್ಕು  ಕಾರ್ಯಾಧ್ಯಕ್ಷ ಸ್ಥಾನ ಸೃಜಿಸುವ ಪ್ರಸ್ತಾಪಕ್ಕೆ ವಿರೋಧ ವ್ಯಕ್ತಪಡಿಸಿರುವ ಕಾಂಗ್ರೆಸ್ ಹಿರಿಯ  ಮುಖಂಡ. ಎಚ್ ಕೆ ಪಾಟೀಲ್, ನಾಲ್ಕು ಕಾರ್ಯಾಧ್ಯಕ್ಷ ಸ್ಥಾನಗಳ ಅವಶ್ಯಕತೆ ಇಲ್ಲ ಎಂದು  ಕಡ್ಡಿ ಮುರಿದಂತೆ ಹೇಳಿದ್ದಾರೆ

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ  ಅವರು, ಸಿದ್ದರಾಮಯ್ಯ ಅವರು ನಾಲ್ಕು ಕಾರ್ಯಾಧ್ಯಕ್ಷ ಬೇಕು ಎಂದು ಹೇಳುತ್ತಿರುವುದು  ಏಕೆ? ಪ್ರಸಕ್ತ ಇರುವ ಒಂದು ಕಾರ್ಯಾಧ್ಯಕ್ಷ ಸ್ಥಾನ ಮತ್ತು ಕೆಪಿಸಿಸಿ ಅಧ್ಯಕ್ಷ ಸ್ಥಾ‌ನ  ವ್ಯವಸ್ಥೆಯನ್ನೇ ಮುಂದುವರೆಸಿದರೆ ಸಾಕು. ನಾಲ್ಕು ಕಾರ್ಯಾಧ್ಯಕ್ಷ ಸ್ಥಾನ ಅವಶ್ಯಕತೆಯೇ  ಇಲ್ಲ ಎಂದರು.

ತಾವು ಅಧ್ಯಕ್ಷ ಸ್ಥಾನಕ್ಕೆ ಆಕಾಂಕ್ಷಿ ಅಲ್ಲ ಎನ್ನುವುದನ್ನು ಒತ್ತಿ  ಹೇಳಿದ ಅವರು, ವಿಪಕ್ಷ ನಾಯಕ ಮತ್ತು ಶಾಸಕಾಂಗ ನಾಯಕರ ಸ್ಥಾನ ಒಬ್ಬರಿಗೆ ಸಿಗುವುದು  ಬೇಡ. ಎರಡು ಹುದ್ದೆಗಳು ಪ್ರತ್ಯೇಕವಾಗಲಿ. ಮೈತ್ರಿ ಸರ್ಕಾರದಲ್ಲಿ ಹುದ್ದೆ  ವಿಭಾಗವಾಗಿತ್ತು. ಕೇಂದ್ರದಲ್ಲಿ ಯುಪಿಎ ಅವಧಿಯಲ್ಲಿ ಸೋನಿಯಾ ಗಾಂಧಿ ಅವರನ್ನೂ ಸೇರಿದಂತೆ  ಹುದ್ದೆ ಹಂಚಿಕೆ ಆಗಿತ್ತು. ಮಹಾರಾಷ್ಟ್ರದಲ್ಲೂ ಹಿಂದೆ ಶಾಸಕಾಂಗ ಮತ್ತು ವಿಪಕ್ಷ ಸ್ಥಾನ  ಹಂಚಿಕೆ ಆಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT