ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಪಾಕಿಸ್ತಾನ​ ಪರ ಮಾತಾಡುವ ಕುಮಾರಸ್ವಾಮಿಯವರದ್ದೂ ಒಂದು ಬದುಕಾ?

ಪಾಕಿಸ್ತಾನ ಪರ ವಹಿಸಿ ಮಾತನಾಡುವ ಮಾಜಿ ಸಿಎಂ ಕುಮಾರಸ್ವಾಮಿ ಅವರದು ಒಂದು ಬದುಕಾ ಎಂದು ಸಚಿವ ಆರ್​ ಅಶೋಕ್​  ಪ್ರಶ್ನಿಸಿದ್ದಾರೆ.

ಬೆಂಗಳೂರು: ಪಾಕಿಸ್ತಾನ ಪರ ವಹಿಸಿ ಮಾತನಾಡುವ ಮಾಜಿ ಸಿಎಂ ಕುಮಾರಸ್ವಾಮಿ ಅವರದು ಒಂದು ಬದುಕಾ ಎಂದು ಸಚಿವ ಆರ್​ ಅಶೋಕ್​  ಪ್ರಶ್ನಿಸಿದ್ದಾರೆ.

ಪಾಕಿಸ್ತಾನ ಇಲ್ಲದಿದ್ದರೆ ನೀವು ಇಲ್ಲಿ ಒಂದು ಮತವನ್ನು ಕೂಡ ಪಡೆಯುತ್ತಿರಲಿಲ್ಲ. ಅದಕ್ಕಾಗಿಯೇ ಪಾಕಿಸ್ತಾನ ನಾಮ ಸ್ಮರಣೆ ನಿಮ್ಮ ಕಾಯಕವಾಗಿದೆ ಎಂದು ಕುಮಾರಸ್ವಾಮಿ ಪರೋಕ್ಷವಾಗಿ ಬಿಜೆಪಿ ನಾಯಕರನ್ನು ಉದ್ದೇಶಿಸಿ ಟ್ವೀಟ್​ ಮಾಡಿದ್ದರು.

ಕುಮಾರಸ್ವಾಮಿ ಅವರ ಈ ಟ್ವೀಟ್​ಗೆ  ಖಾರವಾಗಿ ಪ್ರತಿಕ್ರಿಯಿಸಿರುವ ಅವರು, ಅಲ್ಪಸಂಖ್ಯಾತ ಮತಗಳು ಕಾಂಗ್ರೆಸ್​ಗೆ ಹೋಗುವ ಆತಂಕದಲ್ಲಿ ಅವರು ಈ ರೀತಿ ಮಾತಾಡುತ್ತಿದ್ದಾರೆ. ಅಲ್ಪಸಂಖ್ಯಾತರನ್ನು  ಸೆಳೆಯಲು ಈ ರೀತಿ ಹೇಳಿಕೆ ನೀಡುತ್ತಿದ್ದಾರೆ. ಪಾಕ್​ ಅನ್ನು ಬೆಂಬಲಿಸುವವರನ್ನು ಗುಂಡಿಟ್ಟು ಕೊಲ್ಲಬೇಕು ಎಂದು ಪ್ರತಿಕ್ರಿಯಿಸಿದರು.

ನಮಗೆ ಪಾಕ್​ ಧ್ವಜ ನೋಡಿದರೆ ಸಿಟ್ಟು ಬರುತ್ತದೆ. ಆದರೆ, ಇಲ್ಲಿದ್ದುಕೊಂಡು ಇವರುಗಳು ಪಾಕ್​ ಬೆಂಬಲಿಸುತ್ತಾರೆ ಎಂದು ಕೂಡ ಹರಿಹಾಯ್ದರು. ಇದೇ ವೇಳೆ ಮಂಗಳೂರು ಬಾಂಬ್​ ಪ್ರಕರಣ ಕುರಿತು ಮಾತನಾಡಿದ ಅವರು, ಆದಿತ್ಯನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆದಿತ್ಯನದ್ದು ಮಾನಸಿಕ ಸ್ಥಿತಿ ಸರಿಯಿಲ್ಲ. ಆ ಬಗ್ಗೆ ವೈದ್ಯರು ಕೂಡ ಹೇಳಬೇಕಿದೆ. ಮುಸ್ಲಿಂ ಇರಲಿ, ಹಿಂದೂ ಆಗಿರಲಿ. ಎಲ್ಲರಿಗೂ ಕಾನೂನು ಒಂದೇ. ಇಂಥವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Goa Nightclub Tragedy: ನೈಟ್‌ಕ್ಲಬ್‌ ಮ್ಯಾನೇಜರ್‌ ಬಂಧನ, ಮಾಲೀಕನ ವಿರುದ್ಧ ವಾರಂಟ್‌ ಜಾರಿ

RCB ಫ್ಯಾನ್ಸ್ ಗೆ ಗುಡ್ ನ್ಯೂಸ್: ಚಿನ್ನಸ್ವಾಮಿಯಿಂದ IPL ಪಂದ್ಯಗಳು ಸ್ಥಳಾಂತರವಾಗಲು ಬಿಡಲ್ಲ; ಡಿ.ಕೆ. ಶಿವಕುಮಾರ್

'ಮದುವೆ ರದ್ದಾಗಿದೆ': ಪಲಾಶ್ ಮುಚ್ಚಲ್ ಜೊತೆಗಿನ ವಿವಾಹದ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ!

ತೃಣಮೂಲ ಕಾಂಗ್ರೆಸ್ ನ ಮುಸ್ಲಿಂ ವೋಟ್ ಬ್ಯಾಂಕ್ ಮುಳುಗುತ್ತೆ: ಅಮಾನತುಗೊಂಡ ಶಾಸಕ ಹುಮಾಯುನ್ ಕಬೀರ್ ಎಚ್ಚರಿಕೆ

'ಮುಂದುವರಿಯಲು ನಿರ್ಧರಿಸಿದ್ದೇನೆ': ಸ್ಮೃತಿ ಮಂಧಾನ ಬಳಿಕ ಮದುವೆ ರದ್ದಾದ ಬಗ್ಗೆ ಪಲಾಶ್ ಮುಚ್ಚಲ್ ಮಾತು!

SCROLL FOR NEXT