ಸಂಸದ ನಾರಾಯಣಸ್ವಾಮಿ 
ರಾಜಕೀಯ

ಭಾರತ 'ಅಖಂಡ ಭಾರತ' ಆಗುವ ಸಮಯ ದೂರವಿಲ್ಲ: ಸಂಸದ ನಾರಾಯಣಸ್ವಾಮಿ

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಿತ ಹೇಳಿಕೆಯಬೆನ್ನಿಗೇ ಇದೀಗ ಚಿತ್ರದುರ್ಗ ಸಂಸದ  ಎ ನಾರಾಯಣಸ್ವಾಮಿ ಅವರು ಬಿಜೆಪಿಯ "ಅಖಂಡ ಭಾರತ" ಕನಸು ನನಸಾಗುವ ದಿನ ದೂರವಿಲ್ಲ ಎನ್ನುವ ಮೂಲಕ ಇನ್ನೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಚಿತ್ರದುರ್ಗ: ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಿತ ಹೇಳಿಕೆಯಬೆನ್ನಿಗೇ ಇದೀಗ ಚಿತ್ರದುರ್ಗ ಸಂಸದ  ಎ ನಾರಾಯಣಸ್ವಾಮಿ ಅವರು ಬಿಜೆಪಿಯ "ಅಖಂಡ ಭಾರತ" ಕನಸು ನನಸಾಗುವ ದಿನ ದೂರವಿಲ್ಲ ಎನ್ನುವ ಮೂಲಕ ಇನ್ನೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಸಂಸದ "ಹಿಂದುತ್ವ ಸಿದ್ದಾಂತವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಸಾರ್ವಜನಿಕರನ್ನು ಸೆಳೆಯುತ್ತಿದೆ.ಮತ್ತು ಅವರು ಸಹ ನಮ್ಮೊಡನೆ ಸೇರಿಕೊಳ್ಳಲು ಪ್ರೇರಿತರಾಗುತ್ತಿದ್ದಾರೆ" ಎಂದರು.ನಮ್ಮ ದೇಶ ಅಖಂಡ ಭಾರತ ಆಗುವ ದಿನ ದೂರವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣ ಪೊಲೀಸರ ಅಣಕು ಪ್ರದರ್ಶನ ಎಂದ ಮಾಜಿ ಸಿಎಂ  ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆ ಬಗೆಗೆ ವಿವರಿಸಿದ ಸಂಸದರು ಅವರೂ ಕೂಡ ಹಿಂದೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದವರು. ಅವರು ಇಂತಹಾ ಹೇಳಿಕೆ ನೀಡಿರುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ ಇಂತಹಾ ಹೇಳಿಕೆ ಉತ್ತಮ ಅಭಿರುಚಿಯನ್ನು ಹುಟ್ಟಿಸುವುದಿಲ್ಲಪೊಲೀಸರ ಸ್ಥೈರ್ಯವನ್ನು ಕಡಿಮೆ ಮಾಡಲಿದೆ ಎಂದರು. ಕಾಂಗ್ರೆಸ್ ಮತ್ತು ಜೆಡಿ (ಎಸ್ ಎರಡೂ ಪಕ್ಷಗಳು ರೂ ಪಾಕಿಸ್ತಾನದ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದಲ್ಲಿ ತನ್ನ ಕೃತ್ಯವನ್ನು ಒಪ್ಪಿಕೊಂಡ ಆದಿತ್ಯ ರಾವ್  ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯಕೀಯ ವರದಿ ಬಂದ ಬಳಿಕವೇ ತೀರ್ಮಾನ ಮಾಡಬೇಕಿದೆಎಂದು ಅವರು ಹೇಳಿದರು.

ಬಿಜೆಪಿಗೆ ಆದಿತ್ಯ ರಾವ್ ಅವರೊಂದಿಗೆ ಸಂಬಂಧವಿದೆ ಎಂಬ ಆರೋಪವನ್ನು ನಾರಾಯಣಸ್ವಾಮಿ  ತಳ್ಳಿ ಹಾಕಿದ್ದು ಯಾರೇ ಅಪರಾಧಿಗಳಾದರೂ ಅವರಿಗೆ ಯಾವ ದಯೆತೋರದೆ ಶಿಕ್ಷೆ ವಿಧಿಸಬೇಕು.ಅಲ್ಲದೆ ಬಾಂಬ್ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಬೇಧಿಸಿದ್ದ ಕರ್ನಾಟಕ ಪೋಲೀಸರಿಗೆ ಅಭಿನಂದಿಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT