ಸಂಸದ ನಾರಾಯಣಸ್ವಾಮಿ 
ರಾಜಕೀಯ

ಭಾರತ 'ಅಖಂಡ ಭಾರತ' ಆಗುವ ಸಮಯ ದೂರವಿಲ್ಲ: ಸಂಸದ ನಾರಾಯಣಸ್ವಾಮಿ

ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಿತ ಹೇಳಿಕೆಯಬೆನ್ನಿಗೇ ಇದೀಗ ಚಿತ್ರದುರ್ಗ ಸಂಸದ  ಎ ನಾರಾಯಣಸ್ವಾಮಿ ಅವರು ಬಿಜೆಪಿಯ "ಅಖಂಡ ಭಾರತ" ಕನಸು ನನಸಾಗುವ ದಿನ ದೂರವಿಲ್ಲ ಎನ್ನುವ ಮೂಲಕ ಇನ್ನೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ಚಿತ್ರದುರ್ಗ: ಹೊನ್ನಾಳಿ ಶಾಸಕ ಎಂಪಿ ರೇಣುಕಾಚಾರ್ಯ ವಿವಾದಿತ ಹೇಳಿಕೆಯಬೆನ್ನಿಗೇ ಇದೀಗ ಚಿತ್ರದುರ್ಗ ಸಂಸದ  ಎ ನಾರಾಯಣಸ್ವಾಮಿ ಅವರು ಬಿಜೆಪಿಯ "ಅಖಂಡ ಭಾರತ" ಕನಸು ನನಸಾಗುವ ದಿನ ದೂರವಿಲ್ಲ ಎನ್ನುವ ಮೂಲಕ ಇನ್ನೊಂದು ಹೊಸ ವಿವಾದಕ್ಕೆ ನಾಂದಿ ಹಾಡಿದ್ದಾರೆ.

ನಗರದಲ್ಲಿ ಸುದ್ದಿಗಾರರೊಡನೆ ಮಾತನಾಡಿದ ಸಂಸದ "ಹಿಂದುತ್ವ ಸಿದ್ದಾಂತವು ಪಾಕಿಸ್ತಾನ ಮತ್ತು ಬಾಂಗ್ಲಾದೇಶದ ಸಾರ್ವಜನಿಕರನ್ನು ಸೆಳೆಯುತ್ತಿದೆ.ಮತ್ತು ಅವರು ಸಹ ನಮ್ಮೊಡನೆ ಸೇರಿಕೊಳ್ಳಲು ಪ್ರೇರಿತರಾಗುತ್ತಿದ್ದಾರೆ" ಎಂದರು.ನಮ್ಮ ದೇಶ ಅಖಂಡ ಭಾರತ ಆಗುವ ದಿನ ದೂರವಿಲ್ಲ ಎಂದು ಅವರು ಅಭಿಪ್ರಾಯ ಪಟ್ಟರು.

ಮಂಗಳೂರು ವಿಮಾನ ನಿಲ್ದಾಣದ ಬಾಂಬ್ ಪ್ರಕರಣ ಪೊಲೀಸರ ಅಣಕು ಪ್ರದರ್ಶನ ಎಂದ ಮಾಜಿ ಸಿಎಂ  ಎಚ್‌ಡಿ ಕುಮಾರಸ್ವಾಮಿ ಅವರ ಹೇಳಿಕೆ ಬಗೆಗೆ ವಿವರಿಸಿದ ಸಂಸದರು ಅವರೂ ಕೂಡ ಹಿಂದೆ ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದವರು. ಅವರು ಇಂತಹಾ ಹೇಳಿಕೆ ನೀಡಿರುವುದು ಸರಿಯಲ್ಲ ಎಂದಿದ್ದಾರೆ. ಅಲ್ಲದೆ ಇಂತಹಾ ಹೇಳಿಕೆ ಉತ್ತಮ ಅಭಿರುಚಿಯನ್ನು ಹುಟ್ಟಿಸುವುದಿಲ್ಲಪೊಲೀಸರ ಸ್ಥೈರ್ಯವನ್ನು ಕಡಿಮೆ ಮಾಡಲಿದೆ ಎಂದರು. ಕಾಂಗ್ರೆಸ್ ಮತ್ತು ಜೆಡಿ (ಎಸ್ ಎರಡೂ ಪಕ್ಷಗಳು ರೂ ಪಾಕಿಸ್ತಾನದ ಏಜೆಂಟರಾಗಿ ಕಾರ್ಯನಿರ್ವಹಿಸುತ್ತಿದ್ದು, ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಾಂಬ್ ಪತ್ತೆ ಪ್ರಕರಣದಲ್ಲಿ ತನ್ನ ಕೃತ್ಯವನ್ನು ಒಪ್ಪಿಕೊಂಡ ಆದಿತ್ಯ ರಾವ್  ಆರೋಗ್ಯ ಸ್ಥಿತಿಯ ಬಗ್ಗೆ ವೈದ್ಯಕೀಯ ವರದಿ ಬಂದ ಬಳಿಕವೇ ತೀರ್ಮಾನ ಮಾಡಬೇಕಿದೆಎಂದು ಅವರು ಹೇಳಿದರು.

ಬಿಜೆಪಿಗೆ ಆದಿತ್ಯ ರಾವ್ ಅವರೊಂದಿಗೆ ಸಂಬಂಧವಿದೆ ಎಂಬ ಆರೋಪವನ್ನು ನಾರಾಯಣಸ್ವಾಮಿ  ತಳ್ಳಿ ಹಾಕಿದ್ದು ಯಾರೇ ಅಪರಾಧಿಗಳಾದರೂ ಅವರಿಗೆ ಯಾವ ದಯೆತೋರದೆ ಶಿಕ್ಷೆ ವಿಧಿಸಬೇಕು.ಅಲ್ಲದೆ ಬಾಂಬ್ ಪ್ರಕರಣವನ್ನು ಕೆಲವೇ ಗಂಟೆಗಳಲ್ಲಿ ಬೇಧಿಸಿದ್ದ ಕರ್ನಾಟಕ ಪೋಲೀಸರಿಗೆ ಅಭಿನಂದಿಸಬೇಕು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT