ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ಒಕ್ಕಲಿಗರು ಅಧಿಕಾರಕ್ಕೆ ಬರುವುದನ್ನು, ಹೋರಾಟ ಮಾಡುವುದನ್ನು ಬಿಜೆಪಿ ಸಹಿಸುವುದಿಲ್ಲ: ಕುಮಾರಸ್ವಾಮಿ ತಿರುಗೇಟು

ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾಪ್ರಹಾರ ನಡೆಸಿದ್ದಾರೆ.

ಬೆಂಗಳೂರು: ಒಕ್ಕಲಿಗ ಎಂಬ ಹೆಸರನ್ನು ಕುಮಾರಸ್ವಾಮಿ ಬಳಸಬಾರದು. ಸಮಾಜವನ್ನು ಒಡೆಯುವ, ಕೆಲಸವನ್ನು ಎಚ್‌ಡಿಕೆ ಮಾಡುತ್ತಿದ್ದಾರೆ ಎಂಬ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ವಿರುದ್ಧ ಟೀಕಾಪ್ರಹಾರ ನಡೆಸಿರುವ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ಮುಖಂಡ ಎಚ್  ಡಿ ಕುಮಾರಸ್ವಾಮಿ ಒಂದು ಸಮುದಾಯದ  ನಾಯಕನನ್ನು ಟೀಕಿಸಲು ಅದೇ ಸಮುದಾಯದ ವ್ಯಕ್ತಿಯನ್ನು ಬಳಸಿಕೊಳ್ಳುವುದು ಬಿಜೆಪಿಯ ಸೋಂಕು ಎಂದು ಹರಿಹಾಯ್ದಿದ್ದಾರೆ.

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು, ತನ್ನ ಧರ್ಮ, ಸಮಾಜದ ಬಗ್ಗೆ ಅಪಾರ ಗೌರವ ಇಟ್ಟುಕೊಂಡೂ ಇತರ ಧರ್ಮ, ಸಮಾಜಗಳ ಮೇಲೆ ಅಷ್ಟೇ ಗೌರವ ಹೊಂದುವುದು ನಾನು ನಂಬಿದ ಜಾತ್ಯತೀತತೆ. ಇದರಲ್ಲಿ ಒಕ್ಕಲಿಗ ಅಸ್ಮಿತೆಯೂ ಇದೆ, ಇತರ ಸಮಾಜದ ಮೇಲಿನ ಗೌರವವೂ ಇದೆ. ನಿತ್ಯ ಅನ್ಯಧರ್ಮಗಳ‌ ಮೇಲೆ ದಾಳಿ ಮಾಡುವ, ಜಾತಿಗಳನ್ನು ಮತಕ್ಕಾಗಿ ಬಳಸಿಕೊಳ್ಳುವ ನಿಮ್ಮ ಪಕ್ಷದವರಿಂದ ಪಾಠ ಹೇಳಿಸಿಕೊಳ್ಳಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಒಕ್ಕಲಿಗರ ಜೀನ್ ಕರ್ನಾಟಕದ ಮಣ್ಣಿನಲ್ಲಿದೆ ಎಂದು ಹೇಳಿದರೆ ಆಶ್ವತ್ಥ ನಾರಾಯಣ ಮತ್ತು ಬಿಜೆಪಿಗೆ ಏಕೆ ಕಣ್ಣು ಉರಿ? ನಿಮ್ಮ ಜೀನ್ ಪಾಕಿಸ್ತಾನದಲ್ಲಿದೆ ಎಂಬ ಮರುಕವೇ? ನಿಮ್ಮ ಸಿದ್ಧಾಂತ ಪ್ರತಿಪಾದಕರ ಜೀನ್ 'ನಾಜಿ' ಮೂಲದ್ದು ಎಂಬ ಬೇಸರವೇ? ಈ ಮಣ್ಣಿನವರಾದ 'ನಾವು' ನಮ್ಮ ಅಸ್ಮಿತೆ ಬಗ್ಗೆ ಮಾತಾಡುತ್ತೇವೆ. ತಡೆಯಲು ಬಿಜೆಪಿಗೆ ಸಾಧ್ಯವೇ? ಎಂದು ಅವರು ಸವಾಲು ಹಾಕಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಜೀನಾಮೆ ಬಗ್ಗೆ ಖುದ್ದು ಸುಳಿವು ನೀಡಿದ CM ಸಿದ್ದರಾಮಯ್ಯ; ಸಾಮಾಜಿಕ ಮಾಧ್ಯಮದಲ್ಲಿ ಮಹತ್ವದ ಪೋಸ್ಟ್​!

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ: 15 ಕಿ.ಮೀ. ಒಳಗಿನ ಅಕ್ರಮ ನಿರ್ಮಾಣ ಕೆಡವಲು ಅಮಿತ್ ಶಾ ಸೂಚನೆ

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

SCROLL FOR NEXT