ರಾಜಕೀಯ

ಸಂವಿಧಾನದ ಆಶಯಗಳನ್ನು ಹೊಸಕಿ ಹಾಕಲು ಯತ್ನಿಸುತ್ತಿರುವ ಶಕ್ತಿಗಳ ತಡೆಯಬೇಕಿದೆ: ಸಿದ್ದರಾಮಯ್ಯ

Srinivasamurthy VN

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಮಾಡಿರುವ ಕೇಂದ್ರದ ಮೋದಿ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮುಂದುವರೆಸಿದ್ದಾರೆ.

ಗಣರಾಜ್ಯೋತ್ಸವದ ದಿನದಂದೇ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಟ್ವೀಟ್ ಸಮರ ಮುಂದುವರೆಸಿರುವ ಸಿದ್ದರಾಮಯ್ಯ, ಸಂವಿಧಾನದ ಆಶಯಗಳನ್ನು ಹೊಸಕಿ ಹಾಕಲು ಯತ್ನಿಸುತ್ತಿರುವ ಶಕ್ತಿಗಳ ತಡೆಯಬೇಕಿದೆ ಎಂದು ಹೇಳಿದ್ದಾರೆ.

'ಸಂವಿಧಾನದ ಆಶಯಗಳನ್ನು ವ್ಯವಸ್ಥಿತವಾಗಿ ಹಿಸುಕಿಹಾಕುತ್ತಿರುವ ಪ್ರಯತ್ನ ನಿರ್ಭೀತಿಯಿಂದ ನಡೆಯುತ್ತಿರುವ ಇಂದಿನ ವಿಷಮಕಾಲದಲ್ಲಿ ಸಂವಿಧಾನವನ್ನು ರಕ್ಷಿಸಲು ಪಣತೊಡುವ ಮೂಲಕವೇ ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕಾಗಿದೆ ಎಂದು ಹೇಳಿದ್ದಾರೆ.

SCROLL FOR NEXT