ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು, ಅವರಿಗೆ ಬೆದರಿಕೆ ಹಾಕಲು ಸಾಧ್ಯವಾ?

ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು  ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರು: ಮಾಜಿ ಸಿಎಂ ಕುಮಾರಸ್ವಾಮಿಯವರು ಊರಿಗೆಲ್ಲಾ ಬೆದರಿಕೆ ಹಾಕಬಹುದು ಕೊಲೆ ಬೆದರಿಕೆ ಹಾಕಬಹುದು ಅವರಿಗೆ ಯಾರಾದರೂ ಬೆದರಿಕೆ ಹಾಕಲು ಸಾಧ್ಯನಾ? ಇದೊಂದು  ಸುಳ್ಳು ಸುದ್ದಿ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅಶೋಕ್, ಯಾರಾದರೂ ಕುಮಾರಸ್ವಾಮಿಗೆ ಬೆದರಿಕೆ ಹಾಕಲು ಸಾಧ್ಯನಾ ಎಂದು ಪ್ರಶ್ನಿಸಿದ್ದಾರೆ. ಅವರಿಗೆ ಬೆದರಿಕೆ ಬಂದರೆ ಕಾನೂನಿದೆ ಪೊಲೀಸರಿದ್ದಾರೆ. ಅವರು ಸಿಎಂ ಆಗಿದ್ದವರು, ಯಾರಿಗೆ ದೂರು ನೀಡಬೇಕು ಎಂಬುವುದು ಅವರಿಗೆ ಗೊತ್ತಿದೆ ಎಂದು ತಿಳಿಸಿದ್ದಾರೆ.

ಬೆದರಿಕೆ ಕುರಿತಾಗಿ ಅಗತ್ಯ ಮಾಹಿತಿಯೊಂದಿಗೆ ಪೊಲೀಸರಿಗೆ ದೂರು ಕೊಟ್ಟರೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ. ಯಾವ ನಂಬರ್‌ನಿಂದ ಅವರಿಗೆ ಕರೆ ಬಂದಿದೆ, ಯಾವ ದೇಶದಿಂದ ಕರೆ ಮಾಡಲಾಗಿದೆ ಎಂಬ ಮಾಹಿತಿ ನೀಡಿದರೆ ಸರ್ಕಾರ ತನಿಖೆ ನಡೆಸಿ ಸೂಕ್ತ ಭದ್ರತೆಯನ್ನು ನೀಡಲಿದೆ ಎಂದರು.

ನಿಜಗುಣಾನಂದ ಸ್ವಾಮೀಜಿ, ಎಚ್‌ ಡಿ ಕುಮಾರಸ್ವಾಮಿ ಸೇರಿದಂತೆ 15 ಮಂದಿ ಗಣ್ಯರಿಗೆ ಪತ್ರದ ಮೂಲಕ ಕೊಲೆ ಬೆದರಿಕೆ ಬಂದಿದೆ. ನಿಜಗುಣಾನಂದ ಸ್ವಾಮೀಜಿ ಆಶ್ರಮಕ್ಕೆ ಅನಾಮಧೇಯ ಪತ್ರವೊಂದು ಶುಕ್ರವಾರ ಬಂದಿತ್ತು. ಪತ್ರದಲ್ಲಿ ಕೊಲೆ ಮಾಡುವುದಾಗಿ ಬೆದರಿಕೆ ಹಾಕಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT