ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ 
ರಾಜಕೀಯ

ಪರಿಷತ್ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಲಕ್ಷ್ಮಣ್ ಸವದಿ ಕಣಕ್ಕಿಳಿಸುವ ಸಾಧ್ಯತೆ

ಫೆಬ್ರವರಿ 17 ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಬೆಂಗಳೂರು: ಫೆಬ್ರವರಿ 17 ರಂದು ನಡೆಯಲಿರುವ ವಿಧಾನ ಪರಿಷತ್ ಉಪಚುನಾವಣೆಗೆ ಉಪಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಸಾಧ್ಯತೆ ಇದೆ.

ಪಕ್ಷದ ಮೂಲಗಳ ಪ್ರಕಾರ, ಸವದಿ ಅವರ ಹೆಸರನ್ನು ರಾಜ್ಯದ ಪಕ್ಷದ ಮುಖಂಡರು ಪರಿಷತ್ ಸ್ಥಾನಕ್ಕೆ ಅಂತಿಮಗೊಳಿಸಿದ್ದಾರೆ. ಸವದಿ ಸಂಪುಟದಲ್ಲಿ ಮುಂದುವರಿಯಲು ಅವರು ಆರು ತಿಂಗಳೊಳಗೆ ಮೇಲ್ಮನೆಯ ಸದಸ್ಯರಾಗಬೇಕಾಗಿದೆ. 
 
ವಿಧಾನಸಭೆ ಇಲ್ಲವೇ ವಿಧಾನ ಪರಿಷತ್ ಸದಸ್ಯರಾಗದೆ ಸಂಪುಟದಲ್ಲಿ ಸಚಿವರಾಗಿರುವ ಸವದಿ ಅವರ ಆರು ತಿಂಗಳ ಅವಧಿ ಬರುವ ಫೆ. 20 ರಂದು ಕೊನೆಗೊಳ್ಳಲಿದೆ.

ಇತ್ತೀಚೆಗೆ ನಡೆದ ಉಪಚುನಾವಣೆಯಲ್ಲಿ ಕರ್ನಾಟಕ ವಿಧಾನಸಭೆಯ ಸದಸ್ಯರಾಗಿ ಆಯ್ಕೆಯಾಗಿದ್ದ ಕಾಂಗ್ರೆಸ್ ಸದಸ್ಯ ರಿಜ್ವಾನ್ ಅರ್ಷದ್ ಅವರಿಂದ ಖಾಲಿಯಾಗಿರುವ ಸ್ಥಾನಕ್ಕೆ ವಿಧಾನಸಭೆ ಉಪಚುನಾವಣೆ ನಡೆಯುತ್ತಿದೆ.

ವಿಧಾನಸಭೆ ಅಥವಾ ಪರಿಷತ್ತಿನ ಸದಸ್ಯರಲ್ಲದಿದ್ದರೂ, ಲಕ್ಷ್ಮಣ ಸವದಿ ಅವರನ್ನು ತಮ್ಮ ಸಂಪುಟಕ್ಕೆ ಸೇರಿಸಿಕೊಂಡ ಮುಖ್ಯಮಂತ್ರಿ ಬಿ ಎಸ್ ಯಡಿಯುರಪ್ಪ ಉಪಚುನಾವಣೆಗೆ ಸವದಿಯವರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸುವ ಬಗ್ಗೆ ಬುಧವಾರ ಸುಳಿವು ನೀಡಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡು ರಾವ್ ಅವರು ಪಕ್ಷದ ಅಭ್ಯರ್ಥಿಯನ್ನು ಪರಿಷತ್ ಉಪಚುನಾವಣೆಗಳಿಗೆ ಕಣಕ್ಕಿಳಿಸುವ ಯಾವುದೇ ಸಾಧ್ಯತೆಗಳನ್ನು ಈಗಾಗಲೇ ತಳ್ಳಿಹಾಕಿದ್ದಾರೆ.

224 ಸದಸ್ಯ ಬಲದ ಕರ್ನಾಟಕ ವಿಧಾನಸಭೆಯಲ್ಲಿ ಕೇವಲ 34 ಸದಸ್ಯರನ್ನು ಹೊಂದಿರುವ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಸಾಧ್ಯತೆ ಇಲ್ಲ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT