ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್ ಶಂಕರ್ 
ರಾಜಕೀಯ

ಸಂಪುಟ ವಿಸ್ತರಣೆ: ಕಾಗಿನೆಲೆ ಮಠದ ಕದ ತಟ್ಟುತ್ತಿರುವ ಕುರುಬ ನಾಯಕರು!

ಸಂಪುಟ ವಿಸ್ತರಣೆ ಸಂಬಂಧ ಕೆಲ ದಿನಗಳ ಹಿಂದೆ  ಸಾರ್ವಜನಿಕ ಸಮಾರಂಭದಲ್ಲಿ ಲಿಂಗಾಯತ ಸಮುದಾಯದ ವಚನಾನಂದ ಸ್ವಾಮೀಜಿ ಮುರುಗೇಶ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದರು.

ಮೈಸೂರು: ಸಂಪುಟ ವಿಸ್ತರಣೆ ಸಂಬಂಧ ಕೆಲ ದಿನಗಳ ಹಿಂದೆ  ಸಾರ್ವಜನಿಕ ಸಮಾರಂಭದಲ್ಲಿ ಲಿಂಗಾಯತ ಸಮುದಾಯದ ವಚನಾನಂದ ಸ್ವಾಮೀಜಿ ಮುರುಗೇಶ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದರು.

ಈಗ, ಕುರುಬ ನಾಯಕರ ಸರದಿ,  ಸೋತ ಅಭ್ಯರ್ಥಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದೆಂಬ ಆದೇಶದಿಂದ ಆತಂಕಗೊಂಡಿರುವ  ಕುರುಬ ಸಮುದಾಯದ ನಾಯಕರರು ಕಾಗಿನೆಲೆ ಮಠದ ಕದ ತಟ್ಟುತ್ತಿದ್ದಾರೆ.

ಕುರುಬ ಸಮುದಾಯದ ನಾಯಕರುಗಳಾದ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್, ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಕಾಗಿನೆಲೆ ಶ್ರಿಗಳ ಮೂಲಕ ಒತ್ತಡ ಹಾಕಿಸುವ ತಂತ್ರಕ್ಕೆ ಮುಂದಾಗಿದ್ದಾರೆ.

ಈ ಸಂಬಂದ ಕಾಗಿನೆಲೆಯ ಶ್ರೀ ನಿರಂಜನಾನಂದ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಈ ವಿಷಯವಾಗಿ ತಾವು ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. 

ಇನ್ನು ತಾವು ಶ್ರೀಗಳ ಜೊತೆ  ಮಾತನಾಡಿರುವುದಾಗಿ ವಿಶ್ವನಾಥ್ ಸ್ಪಷ್ಟ ಪಡಿಸಿದ್ದಾರೆ.  ತಾವು ರಾಜಿನಾಮೆ ನೀಡುವ ಮುನ್ನ ಪಕ್ಷ  ತಮಗೆ ನೀಡಿದ್ದ ಭರವಸೆಯನ್ನು ಪಕ್ಷ ಈಡೇರಿಸುತ್ತದೆ ಎಂದು ತಿಳಿಸಿದ್ದಾರೆ. 

ಸೋತ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಕಷ್ಟ ಎಂದು ಎಸ್.ಟಿ ಸೋಮಶೇಖರ್, ಸುಧಾಕರ್ ಹೇಳಿದ್ದಾರೆ, ಆದರೆ ಸೋತ ಶಾಸಕರಿಗೂ ಮಂತ್ರಿ ಸ್ಥಾನ ನೀಡಬೇಕೆಂದು ರಮೇಶ್ ಜಾರಕಿಹೊಳಿ ಮತ್ತು ನಾರಾಯಣಗೌಡ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT