ವಿಶ್ವನಾಥ್, ಎಂಟಿಬಿ ನಾಗರಾಜ್, ಆರ್ ಶಂಕರ್ 
ರಾಜಕೀಯ

ಸಂಪುಟ ವಿಸ್ತರಣೆ: ಕಾಗಿನೆಲೆ ಮಠದ ಕದ ತಟ್ಟುತ್ತಿರುವ ಕುರುಬ ನಾಯಕರು!

ಸಂಪುಟ ವಿಸ್ತರಣೆ ಸಂಬಂಧ ಕೆಲ ದಿನಗಳ ಹಿಂದೆ  ಸಾರ್ವಜನಿಕ ಸಮಾರಂಭದಲ್ಲಿ ಲಿಂಗಾಯತ ಸಮುದಾಯದ ವಚನಾನಂದ ಸ್ವಾಮೀಜಿ ಮುರುಗೇಶ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದರು.

ಮೈಸೂರು: ಸಂಪುಟ ವಿಸ್ತರಣೆ ಸಂಬಂಧ ಕೆಲ ದಿನಗಳ ಹಿಂದೆ  ಸಾರ್ವಜನಿಕ ಸಮಾರಂಭದಲ್ಲಿ ಲಿಂಗಾಯತ ಸಮುದಾಯದ ವಚನಾನಂದ ಸ್ವಾಮೀಜಿ ಮುರುಗೇಶ ನಿರಾಣಿ ಪರ ಬ್ಯಾಟಿಂಗ್ ಮಾಡಿದ್ದರು.

ಈಗ, ಕುರುಬ ನಾಯಕರ ಸರದಿ,  ಸೋತ ಅಭ್ಯರ್ಥಿಗಳನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಾರದೆಂಬ ಆದೇಶದಿಂದ ಆತಂಕಗೊಂಡಿರುವ  ಕುರುಬ ಸಮುದಾಯದ ನಾಯಕರರು ಕಾಗಿನೆಲೆ ಮಠದ ಕದ ತಟ್ಟುತ್ತಿದ್ದಾರೆ.

ಕುರುಬ ಸಮುದಾಯದ ನಾಯಕರುಗಳಾದ ಎಚ್.ವಿಶ್ವನಾಥ್, ಎಂಟಿಬಿ ನಾಗರಾಜ್ ಮತ್ತು ಆರ್. ಶಂಕರ್, ತಮ್ಮನ್ನು ಸಂಪುಟಕ್ಕೆ ಸೇರಿಸಿಕೊಳ್ಳಬೇಕೆಂದು ಪಟ್ಟು ಹಿಡಿದಿದ್ದಾರೆ. ಹೀಗಾಗಿ ಕಾಗಿನೆಲೆ ಶ್ರಿಗಳ ಮೂಲಕ ಒತ್ತಡ ಹಾಕಿಸುವ ತಂತ್ರಕ್ಕೆ ಮುಂದಾಗಿದ್ದಾರೆ.

ಈ ಸಂಬಂದ ಕಾಗಿನೆಲೆಯ ಶ್ರೀ ನಿರಂಜನಾನಂದ ಸ್ವಾಮಿಗಳ ಜೊತೆ ದೂರವಾಣಿ ಮೂಲಕ ಚರ್ಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.  ಈ ವಿಷಯವಾಗಿ ತಾವು ಮುಖ್ಯಮಂತ್ರಿಗಳ ಬಳಿ ಮಾತನಾಡುವುದಾಗಿ ಭರವಸೆ ನೀಡಿದ್ದಾರೆ. 

ಇನ್ನು ತಾವು ಶ್ರೀಗಳ ಜೊತೆ  ಮಾತನಾಡಿರುವುದಾಗಿ ವಿಶ್ವನಾಥ್ ಸ್ಪಷ್ಟ ಪಡಿಸಿದ್ದಾರೆ.  ತಾವು ರಾಜಿನಾಮೆ ನೀಡುವ ಮುನ್ನ ಪಕ್ಷ  ತಮಗೆ ನೀಡಿದ್ದ ಭರವಸೆಯನ್ನು ಪಕ್ಷ ಈಡೇರಿಸುತ್ತದೆ ಎಂದು ತಿಳಿಸಿದ್ದಾರೆ. 

ಸೋತ ಶಾಸಕರಿಗೆ ಸಚಿವ ಸ್ಥಾನ ನೀಡುವುದು ಕಷ್ಟ ಎಂದು ಎಸ್.ಟಿ ಸೋಮಶೇಖರ್, ಸುಧಾಕರ್ ಹೇಳಿದ್ದಾರೆ, ಆದರೆ ಸೋತ ಶಾಸಕರಿಗೂ ಮಂತ್ರಿ ಸ್ಥಾನ ನೀಡಬೇಕೆಂದು ರಮೇಶ್ ಜಾರಕಿಹೊಳಿ ಮತ್ತು ನಾರಾಯಣಗೌಡ ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇರಾನ್ ನಮಗೆ ಬೆದರಿಕೆಯೊಡ್ಡಿತ್ತು, ಆದರೆ ಈಗ ಬದುಕುಳಿಯಲು ಹೋರಾಡುತ್ತಿದೆ': ಶಾಂತಿ ಮಾತುಕತೆ ವಿಫಲದ ಬಳಿಕ ಇಸ್ರೇಲ್!

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

SCROLL FOR NEXT