ಬಿ ಶ್ರೀರಾಮುಲು 
ರಾಜಕೀಯ

ಗನ್ ಮ್ಯಾನ್ ವಿಷಯದಲ್ಲಿ ದ್ವೇಷದ ರಾಜಕಾರಣ‌ ಮಾಡುವುದಿಲ್ಲ: ಸಚಿವ ಶ್ರೀರಾಮುಲು

ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಕಲಬುರಗಿ: ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. 

ಮಾಜಿ  ಸಚಿವರಿಗೆ ಸರ್ಕಾರದಿಂದ ಗನ್‌ಮ್ಯಾನ್ ವಾಪಾಸ್ ಪಡೆದು ಬಿಜೆಪಿ ದ್ವೇಷದ ರಾಜಕಾರಣ  ಮಾಡುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆ‌ ಕುರಿತು ಕಲಬುರಗಿ ವಿಮಾನ ನಿಲ್ದಾಣದಲ್ಲಿ  ಪ್ರತಿಕ್ರಿಯಿಸಿದ ಸಚಿವರು, ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಸಿದ್ಧಾಂತ ಎಂದರು. 

ಸಚಿವ ಸಂಪುಟ ವಿಸ್ತರಣೆ ತಿಂಗಳ ಫೆಬ್ರವರಿ ಮೊದಲ ವಾರ ಅಥವಾ ಮಾರ್ಚ್ ಮೊದಲ ವಾರ ಆಗುತ್ತದೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. 

ಇನ್ನು  ಮುಂದೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‌ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ. ರಮೇಶ್ ಜಾರಕಿಹೊಳಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅವರು ತಮ್ಮ ಸಹೋದರನಿದ್ದಂತೆ ಎಂದರು.

ಅವರು ಮತ್ತು ತಾವು ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿರುವುದರಿಂದ ಈ ರೀತಿ ಆಗಿಲ್ಲ. ಅಲ್ಲದೇ, ಡಿಸಿಎಂ ಹುದ್ದೆ ತಮಗೆ ಬೇಕು‌ ಎಂಬ ಪಟ್ಟು ತಾವು ಹಿಡಿದಿಲ್ಲ ಎಂದರು.

ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಮತ್ತು ಸಮಾಜದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಅವರು ಅಭಿಮಾನದಿಂದ ಅಭಿಯಾನ ನಡೆಸುತ್ತಿರಬಹುದು.  ಆದರೆ,‌ ತಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

SCROLL FOR NEXT