ಬಿ ಶ್ರೀರಾಮುಲು 
ರಾಜಕೀಯ

ಗನ್ ಮ್ಯಾನ್ ವಿಷಯದಲ್ಲಿ ದ್ವೇಷದ ರಾಜಕಾರಣ‌ ಮಾಡುವುದಿಲ್ಲ: ಸಚಿವ ಶ್ರೀರಾಮುಲು

ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಕಲಬುರಗಿ: ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ ಎಂದು ಮಾಜಿ ಸಚಿವ  ಡಿಕೆ ಶಿವಕುಮಾರ್ ಅವರಿಗೆ ಸಚಿವ ಬಿ. ಶ್ರೀರಾಮುಲು ತಿರುಗೇಟು ನೀಡಿದ್ದಾರೆ. 

ಮಾಜಿ  ಸಚಿವರಿಗೆ ಸರ್ಕಾರದಿಂದ ಗನ್‌ಮ್ಯಾನ್ ವಾಪಾಸ್ ಪಡೆದು ಬಿಜೆಪಿ ದ್ವೇಷದ ರಾಜಕಾರಣ  ಮಾಡುತ್ತಿದೆ ಎಂಬ ಡಿ. ಕೆ. ಶಿವಕುಮಾರ್ ಹೇಳಿಕೆ‌ ಕುರಿತು ಕಲಬುರಗಿ ವಿಮಾನ ನಿಲ್ದಾಣದಲ್ಲಿ  ಪ್ರತಿಕ್ರಿಯಿಸಿದ ಸಚಿವರು, ಎಲ್ಲರನ್ನೂ ಸಮಾನವಾಗಿ ಕಾಣುವುದು ನಮ್ಮ ಪಕ್ಷದ ಸಿದ್ಧಾಂತ ಎಂದರು. 

ಸಚಿವ ಸಂಪುಟ ವಿಸ್ತರಣೆ ತಿಂಗಳ ಫೆಬ್ರವರಿ ಮೊದಲ ವಾರ ಅಥವಾ ಮಾರ್ಚ್ ಮೊದಲ ವಾರ ಆಗುತ್ತದೆ. ಪಕ್ಷದ ನಿರ್ಧಾರಕ್ಕೆ ನಾನು ಬದ್ಧ ಎಂದು ತಿಳಿಸಿದರು. 

ಇನ್ನು  ಮುಂದೆ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿ ಇಲ್ಲ ಎಂಬ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು,‌ ಪಕ್ಷದ ಹೈಕಮಾಂಡ್ ನಿರ್ಧಾರಕ್ಕೆ ತಾವು ಬದ್ಧ. ರಮೇಶ್ ಜಾರಕಿಹೊಳಿ ಮತ್ತು ತಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅವರು ತಮ್ಮ ಸಹೋದರನಿದ್ದಂತೆ ಎಂದರು.

ಅವರು ಮತ್ತು ತಾವು ಡಿಸಿಎಂ ಹುದ್ದೆಗೆ ಪಟ್ಟು ಹಿಡಿದಿರುವುದರಿಂದ ಈ ರೀತಿ ಆಗಿಲ್ಲ. ಅಲ್ಲದೇ, ಡಿಸಿಎಂ ಹುದ್ದೆ ತಮಗೆ ಬೇಕು‌ ಎಂಬ ಪಟ್ಟು ತಾವು ಹಿಡಿದಿಲ್ಲ ಎಂದರು.

ವಾಲ್ಮೀಕಿ ಸಮಾಜದ ಸ್ವಾಮೀಜಿಗಳು ಮತ್ತು ಸಮಾಜದ ಕೆಲವರು ಸಾಮಾಜಿಕ ಜಾಲತಾಣದಲ್ಲಿ ಅಭಿಯಾನ ನಡೆಸುತ್ತಿದ್ದಾರೆ. ಅವರು ಅಭಿಮಾನದಿಂದ ಅಭಿಯಾನ ನಡೆಸುತ್ತಿರಬಹುದು.  ಆದರೆ,‌ ತಾವು ಹೈಕಮಾಂಡ್ ನಿರ್ಧಾರಕ್ಕೆ ಬದ್ಧ ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ವಿಯೆಟ್ನಾಂ ದೋಣಿ ದುರಂತ: 15 ಭಾರತೀಯ ಪ್ರವಾಸಿಗರು ಸಾವು; ತಮಿಳುನಾಡು, ಆಂಧ್ರ ಮಂದಿ ಸಮುದ್ರಪಾಲು, Video!

INS Mahendragiri: ಪ್ರಾಜೆಕ್ಟ್ 17A, ಕೇವಲ 18 ತಿಂಗಳಲ್ಲಿ 6ನೇ ಯುದ್ಧನೌಕೆ ನೌಕಾಪಡೆ ಸೇರ್ಪಡೆ, Video

ಸರ್ಕಾರ ಉರುಳಿಸಲು BJPಯಿಂದ ಕುದುರೆ ವ್ಯಾಪಾರ: ಒಬ್ಬ ಶಾಸಕನಿಗೆ ಬರೋಬ್ಬರಿ 20-30 ಕೋಟಿ ಆಫರ್: ಸಿಎಂ ಅಬ್ದುಲ್ಲಾ ಆರೋಪ

EDಯಿಂದ ಅನಿಲ್ ಅಂಬಾನಿಗೆ ಸೇರಿದ 1,000 ಕೋಟಿ ರೂ.ಗೂ ಹೆಚ್ಚು ಮೌಲ್ಯದ ಹೆಚ್ಚುವರಿ ಆಸ್ತಿಗಳ ಮುಟ್ಟುಗೋಲು!

ಮದುವೆಯಾದ ಎರಡು ದಿನಕ್ಕೇ ಕುಟುಂಬಸ್ಥರಿಂದಲೇ ನವವಿವಾಹಿತೆ ಕಿಡ್ನಾಪ್, Video ವೈರಲ್