ಹರಿಪ್ರಸಾದ್ 
ರಾಜಕೀಯ

ಎಂಎಲ್‌ಸಿಗಳಾಗಿ ಬಿ.ಕೆ. ಹರಿಪ್ರಸಾದ್, ನಾಸೀರ್ ಅಹ್ಮದ್ ಪ್ರಮಾಣವಚನ ಸ್ವೀಕಾರ

ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಬೆಂಗಳೂರು: ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್ ಹಾಗೂ ನಾಸೀರ್ ಅಹ್ಮತ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ರಾಷ್ಟ್ರೀಯ ರಾಜಕೀಯದಲ್ಲಿ ದಶಕಗಳ ಬಳಿಕ, ಪಕ್ಷದ ಹೈಕಮಾಂಡ್ ನನ್ನನ್ನು ರಾಜ್ಯ ರಾಜಕಾರಣಕ್ಕೆ ತರಲು ನಿರ್ಧರಿಸಿದೆ. ಪ್ರಸ್ತುತ ರಾಜ್ಯಕೋವಿಡ್ -19 ನಂತಹ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದು, ಜನರು ಹೆಚ್ಚು ಚೇತರಿಸಿಕೊಳ್ಳಉವಂತೆ ಮಾಡಲು ನಾನು ಹೋರಾಟ ಮಾಡುತ್ತೇವೆಂದು ನಾಸೀರ್ ಅಹ್ಮದ್ ಅವರು ಹೇಳಿದ್ದಾರೆ. 

ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಮತ್ತು 17 ರಾಜ್ಯಗಳ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಹರಿಪ್ರಸಾದ್ ಅವರು ಪರಿಷತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. 

ಎಸ್ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದ ನಸೀರ್ ಅಹ್ಮದ್ ಅವರು, ಈ ಹಿಂದೆ ಮೂರು ಬಾರಿ ಪರಿಷತ್ ಸದಸ್ಯರಾಗಿದ್ದರು. 

ಬಿಜೆಪಿಯ ನೂತನ ಸದಸ್ಯರು ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಹೇಳಿದ್ದಾರೆ. ಇನ್ನು ಜೆಡಿಎಸ್ ಸದಸ್ಯ ಇಂಚರ ಗೋವಿಂದ್ ರಾಜ್ ಅವರು ಮಾತನಾಡಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಲಭ್ಯತೆಗೆ ಅನುಗುಣವಾಗಿ ಜುಲೈ 20ರ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

60 ದಿನಗಳ ಕದನ ವಿರಾಮ ವಿಸ್ತರಣೆಗೆ ಅಮೆರಿಕ, ಇರಾನ್ ಸಂಧಾನಕಾರರು ಒಪ್ಪಿಗೆ; ಟ್ರಂಪ್ ಅನುಮೋದನೆ ಬಾಕಿ

ಕರ್ನಾಟಕ ನಾಯಕತ್ವ ಬದಲಾವಣೆಯ ನಡುವೆ CM ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮತ್ತೆ ದೆಹಲಿಗೆ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಶನಿವಾರ; ತದನಂತರ ನೂತನ ಸಿಎಂ ಪದಗ್ರಹಣ ಸಾಧ್ಯತೆ!

ಕ್ರೇಜಿಸ್ಟಾರ್ ರವಿಚಂದ್ರನ್ ವಿರುದ್ಧವೇ ಅತ್ಯಾಚಾರ ಯತ್ನ ಆರೋಪ, ಮಾನನಷ್ಟ ಮೊಕದ್ದಮೆ: ಕಣ್ಣೀರಿಟ್ಟು ಕ್ಷಮೆ ಕೇಳಿದ 'ಹಳ್ಳಿಮೇಷ್ಟ್ರು' ನಟಿ Bindiya!

Karnataka CM News LIVE Updates | ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ; ಸಿಎಲ್‌ಪಿ ಸಭೆ ಶನಿವಾರ ಸಾಧ್ಯತೆ!

SCROLL FOR NEXT