ಹರಿಪ್ರಸಾದ್ 
ರಾಜಕೀಯ

ಎಂಎಲ್‌ಸಿಗಳಾಗಿ ಬಿ.ಕೆ. ಹರಿಪ್ರಸಾದ್, ನಾಸೀರ್ ಅಹ್ಮದ್ ಪ್ರಮಾಣವಚನ ಸ್ವೀಕಾರ

ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಬೆಂಗಳೂರು: ಮೇಲ್ಮನೆಗೆ ನೂತನ ಸದಸ್ಯರಾಗಿ ಆಯ್ಕೆಯಾಗಿದ್ದ ಇಬ್ಬರು ಕಾಂಗ್ರೆಸ್ ನಾಯಕರು ಗುರುವಾರ ಪ್ರಮಾಣವಚನ ಸ್ವೀಕಾರ ಮಾಡಿದರು. 

ಕಾಂಗ್ರೆಸ್ ನಾಯಕರಾದ ಬಿ.ಕೆ.ಹರಿಪ್ರಸಾದ್ ಹಾಗೂ ನಾಸೀರ್ ಅಹ್ಮತ್ ಅವರು ವಿಧಾನ ಪರಿಷತ್ ಸದಸ್ಯರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. 

ರಾಷ್ಟ್ರೀಯ ರಾಜಕೀಯದಲ್ಲಿ ದಶಕಗಳ ಬಳಿಕ, ಪಕ್ಷದ ಹೈಕಮಾಂಡ್ ನನ್ನನ್ನು ರಾಜ್ಯ ರಾಜಕಾರಣಕ್ಕೆ ತರಲು ನಿರ್ಧರಿಸಿದೆ. ಪ್ರಸ್ತುತ ರಾಜ್ಯಕೋವಿಡ್ -19 ನಂತಹ ಕಠಿಣ ಸವಾಲುಗಳನ್ನು ಎದುರಿಸುತ್ತಿದ್ದು, ಜನರು ಹೆಚ್ಚು ಚೇತರಿಸಿಕೊಳ್ಳಉವಂತೆ ಮಾಡಲು ನಾನು ಹೋರಾಟ ಮಾಡುತ್ತೇವೆಂದು ನಾಸೀರ್ ಅಹ್ಮದ್ ಅವರು ಹೇಳಿದ್ದಾರೆ. 

ನಾಲ್ಕು ಬಾರಿ ರಾಜ್ಯಸಭಾ ಸದಸ್ಯರಾಗಿರುವ ಮತ್ತು 17 ರಾಜ್ಯಗಳ ಎಐಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ರಾಜ್ಯ ಉಸ್ತುವಾರಿ ವಹಿಸಿಕೊಂಡಿರುವ ಹರಿಪ್ರಸಾದ್ ಅವರು ಪರಿಷತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಪಕ್ಷದ ಬಲವನ್ನು ಹೆಚ್ಚಿಸುವ ನಿರೀಕ್ಷೆಯಿದೆ. 

ಎಸ್ ಬಂಗಾರಪ್ಪ ಅವರ ಸಂಪುಟದಲ್ಲಿ ಸಚಿವರಾಗಿದ್ದ ನಸೀರ್ ಅಹ್ಮದ್ ಅವರು, ಈ ಹಿಂದೆ ಮೂರು ಬಾರಿ ಪರಿಷತ್ ಸದಸ್ಯರಾಗಿದ್ದರು. 

ಬಿಜೆಪಿಯ ನೂತನ ಸದಸ್ಯರು ಇಂದು ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆಂದು ಬಿಜೆಪಿ ಎಂಎಲ್ಸಿ ರವಿಕುಮಾರ್ ಅವರು ಹೇಳಿದ್ದಾರೆ. ಇನ್ನು ಜೆಡಿಎಸ್ ಸದಸ್ಯ ಇಂಚರ ಗೋವಿಂದ್ ರಾಜ್ ಅವರು ಮಾತನಾಡಿ, ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಲಭ್ಯತೆಗೆ ಅನುಗುಣವಾಗಿ ಜುಲೈ 20ರ ನಂತರ ಪ್ರಮಾಣ ವಚನ ಸ್ವೀಕರಿಸುವುದಾಗಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT