ಖಾದರ್ 
ರಾಜಕೀಯ

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಖಾದರ್ ಆರೋಪ

ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ.

ಮಂಗಳೂರು: ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೂ.500 ಇರುವ ಸ್ಯಾನಿಟೈಜರ್‌ಗಳನ್ನು ರೂ. 900ಗೆ ಮತ್ತು ರೂ.1,200 ಇರುವ ಥರ್ಮಲ್ ಮೀಟರ್ ಗಳಿಗೆ ರೂ.9,000 ಸರ್ಕಾರ ಪಾವತಿ ಮಾಡಿದೆ. 1000 ವೆಂಟಿಲೇಟರ್ ಗಳನ್ನು ರೂ.120 ಕೋಟಿಗೆ ಖರೀದಿ ಮಾಡಿದೆ. ಆದರೆ, ಮಾರುಕಟ್ಟೆ ದರ ಕೇವಲ ರೂ.40 ಕೋಟಿ ಹಾಗೂ 150 ಕೋಟಿ ವೆಚ್ಚದಲ್ಲಿ 4089 ಲಕ್ಷ ಪಿಪಿಇ ಕಿಟ್ ಖರೀದಿ ಮಾಡಿದೆ. ಆದರೆ, ಅದರ ಮಾರುಕಟ್ಟೆ ದರ ಕೇವಲ ರೂ.50 ಕೋಟಿ, ರೂ.40 ಕೋಟಿ ನಲ್ಲಿ 10 ಲಕ್ಷ ಮಾಸ್ಕ್ ಖರೀದಿ ಮಾಡಿದೆ. ಹಾಗಾದರೆ ಒಂದು ಮಾಸ್ಕ್ ದರ ರೂ.400 ವೆಚ್ಚ ತಗುಲುತ್ತದೆ. ಇಷ್ಟೆಲ್ಲ ಖರೀದಿ ಮಾಡುವಾಗ ಕಡಿಮೆ ವೆಚ್ಚದಲ್ಲಿ ಬರಬೇಕೇ ಹೊರತು ಇಲ್ಲಿ ದುಪ್ಪಟ್ಟಾಗಿದೆ. ಇದರಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲಿಗೆ ಬಂದಿದೆ ಎಂದು ಆರೋಪಿಸಿದ್ದಾರೆ. 

ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಟ್ಟು 3 ತಿಂಗಳುಗಳು ಕಳೆದಿವೆ. ಆದರೂ ರಾಜ್ಯ ಸರ್ಕಾರ ಅಗತ್ಯ ರೋಗಿಗಳಿಗೆ ಆ್ಯಂಬುಲೆನ್ಸ್ ರವಾನಿಸಲು ಸಂಕಷ್ಟಪಡುತ್ತಿದೆ. ಅಗತ್ಯ ಇರುವ ರೋಗಿಗಳಿಗೆ ಆ್ಯಂಬುಲೆನ್ಸ್ ರವಾನಿಸುವ ಬದಲು ಸರ್ಕಾರ ಅಂತ್ಯ ಸಂಸ್ಕಾರಗಳಿಗೆ ರವಾನಿಸುತ್ತಿವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT