ಖಾದರ್ 
ರಾಜಕೀಯ

ಕೊರೋನಾ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ: ಶಾಸಕ ಖಾದರ್ ಆರೋಪ

ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ.

ಮಂಗಳೂರು: ಕೊರೋನಾ ಚಿಕಿತ್ಸೆ ವೈದ್ಯಕೀಯ ಸಲಕರಣೆ ಖರೀದಿ ಹೆಸರಿನಲ್ಲಿ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಶಾಸಕ ಯುಟಿ ಖಾದರ್ ಅವರು ಆರೋಪಿಸಿದ್ದಾರೆ. 

ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, ರೂ.500 ಇರುವ ಸ್ಯಾನಿಟೈಜರ್‌ಗಳನ್ನು ರೂ. 900ಗೆ ಮತ್ತು ರೂ.1,200 ಇರುವ ಥರ್ಮಲ್ ಮೀಟರ್ ಗಳಿಗೆ ರೂ.9,000 ಸರ್ಕಾರ ಪಾವತಿ ಮಾಡಿದೆ. 1000 ವೆಂಟಿಲೇಟರ್ ಗಳನ್ನು ರೂ.120 ಕೋಟಿಗೆ ಖರೀದಿ ಮಾಡಿದೆ. ಆದರೆ, ಮಾರುಕಟ್ಟೆ ದರ ಕೇವಲ ರೂ.40 ಕೋಟಿ ಹಾಗೂ 150 ಕೋಟಿ ವೆಚ್ಚದಲ್ಲಿ 4089 ಲಕ್ಷ ಪಿಪಿಇ ಕಿಟ್ ಖರೀದಿ ಮಾಡಿದೆ. ಆದರೆ, ಅದರ ಮಾರುಕಟ್ಟೆ ದರ ಕೇವಲ ರೂ.50 ಕೋಟಿ, ರೂ.40 ಕೋಟಿ ನಲ್ಲಿ 10 ಲಕ್ಷ ಮಾಸ್ಕ್ ಖರೀದಿ ಮಾಡಿದೆ. ಹಾಗಾದರೆ ಒಂದು ಮಾಸ್ಕ್ ದರ ರೂ.400 ವೆಚ್ಚ ತಗುಲುತ್ತದೆ. ಇಷ್ಟೆಲ್ಲ ಖರೀದಿ ಮಾಡುವಾಗ ಕಡಿಮೆ ವೆಚ್ಚದಲ್ಲಿ ಬರಬೇಕೇ ಹೊರತು ಇಲ್ಲಿ ದುಪ್ಪಟ್ಟಾಗಿದೆ. ಇದರಿಂದ ಬಿಜೆಪಿ ಸರ್ಕಾರದ ಭ್ರಷ್ಟಾಚಾರ ಬಯಲಿಗೆ ಬಂದಿದೆ ಎಂದು ಆರೋಪಿಸಿದ್ದಾರೆ. 

ಕೊರೋನಾ ವೈರಸ್ ರಾಜ್ಯಕ್ಕೆ ಕಾಲಿಟ್ಟು 3 ತಿಂಗಳುಗಳು ಕಳೆದಿವೆ. ಆದರೂ ರಾಜ್ಯ ಸರ್ಕಾರ ಅಗತ್ಯ ರೋಗಿಗಳಿಗೆ ಆ್ಯಂಬುಲೆನ್ಸ್ ರವಾನಿಸಲು ಸಂಕಷ್ಟಪಡುತ್ತಿದೆ. ಅಗತ್ಯ ಇರುವ ರೋಗಿಗಳಿಗೆ ಆ್ಯಂಬುಲೆನ್ಸ್ ರವಾನಿಸುವ ಬದಲು ಸರ್ಕಾರ ಅಂತ್ಯ ಸಂಸ್ಕಾರಗಳಿಗೆ ರವಾನಿಸುತ್ತಿವೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT