ಈಶ್ವರ ಖಂಡ್ರೆ 
ರಾಜಕೀಯ

'ಜಗಳ ಯಾಕೆ? ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ವಿಲೀನಗೊಳಿಸಿ'

ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ..

ಬೆಂಗಳೂರು: ಕೊರೋನಾ ಸಂಬಂಧ ವಿಭಿನ್ನ ಮಾಹಿತಿ, ವೈರುಧ್ಯ ಹೇಳಿಕೆ, ಪದೇ ಪದೇ ನೀತಿ ನಿಯಮ ಸುಧಾರಣೆಗಳಿಂದ ಜನರು ಗೊಂದಲದಲ್ಲಿದ್ದಾರೆ, ಎರಡು ಇಲಾಖೆಗಳಲ್ಲಿ ಸಮನ್ವಯ ಕೊರತೆಯಿದೆ ಹೀಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಗಳನ್ನು ವಿಲೀನಗೊಳಿಸಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ಕನಿಷ್ಠ ಕೋವಿಡ್ ಸಮಸ್ಯೆ ಮುಗಿಯುವ ವರೆಗೆ ಎರಡೂ ಇಲಾಖೆಯನ್ನ ವಿಲೀನಗೊಳಿಸಿ  ಒಂದೇ ನೇತೃತ್ವದ ಅಡಿಯಲ್ಲಿ ಆಡಳಿತ ನೀಡುವಂತೆ ಕಾಂಗ್ರೆಸ್ ಪಕ್ಷದ ವತಿಯಿಂದ ಒತ್ತಾಯಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಕೋವಿಡ್ ನಿಯಂತ್ರಣದಲ್ಲಿ ದಿನಕ್ಕೊಂದು ಆದೇಶ, ಘಳಿಗೆಗೆ ಒಂದು ಸತ್ತೋಲೆ, ಕ್ಷಣಕ್ಕೊಂದು ನಿರ್ಧಾರ ತೆಗೆದುಕೊಂಡು ನಿರ್ವಹಣೆಯಲ್ಲಿ ವಿಫಲವಾಗಿದೆ. ಇಲಾಖೆಗಳ ಸಮನ್ವಯದ ಕೊರತೆಯಿಂದ ಜನ ರಸ್ತೆಯಲ್ಲೇ ಪರದಾಡುವಂತಾಗಿದೆ ಎಂದು ಖಂಡ್ರೆ ಟ್ವೀಟ್ ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನೂ ರಾಜ್ಯದ ಪ್ರತಿಯೊಬ್ಬ ನಾಗರಿಕರನ್ನು ಕೊರೊನಾ ವಿಮೆ ವ್ಯಾಪ್ತಿಗೆ ತರಲು ಸರಕಾರವೇ ವಿಮಾ ಪ್ರೀಮಿಯಂ ಭರಿಸಬೇಕು ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಆಗ್ರಹಿಸಿದ್ದಾರೆ.

ಈ ಸಂಬಂಧ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಪಾಟೀಲ್‌ '' ಸಕಾಲದಲ್ಲಿ ಸರಕಾರ ಸಮರ್ಪಕ ಕ್ರಮಗಳನ್ನು ಕೈಗೊಳ್ಳದಿದ್ದರೆ ಬೆಂಗಳೂರನ್ನು, ಕರ್ನಾಟಕವನ್ನು ಇಟಲಿ ಇಲ್ಲವೇ ನ್ಯೂಯಾರ್ಕ್‌ ರೀತಿ ಹೀನಾಯ ಸ್ಥಿತಿಗೆ ತಳ್ಳಿದ್ದಕ್ಕಾಗಿ ಜನರ ಆಕ್ರೋಶಕ್ಕೆ ಗುರಿಯಾಗುವಿರಿ,'' ಎಂದು ಎಚ್ಚರಿಸಿದ್ದಾರೆ.

''ಕೋವಿಡ್‌ನಿಂದ ಜನರನ್ನು ರಕ್ಷಿಸಲು ಸರಕಾರ ಮಾಡುತ್ತಿರುವ ಪ್ರಯತ್ನ ಏನೇನೂ ಸಾಲದು ಎಂಬಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಸೋಂಕಿತರನ್ನು ಆಸ್ಪತ್ರೆಗೆ ಕರೆದೊಯ್ಯುವ, ಗಂಭೀರ ರೋಗಿಗಳ ಕಾಳಜಿಯಲ್ಲಿ ಕೊರತೆ ಮತ್ತು ಇನ್ನೂ ಅನೇಕ ವಿಚಾರದಲ್ಲಿ ಪ್ರಮಾದಗಳು ನಡೆಯುತ್ತಿವೆ. ದೂರದೃಷ್ಟಿ ಮತ್ತು ಪರಿಣಾಮಕಾರಿ ಅಲ್ಲದ ಕ್ರಮಗಳು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿವೆ,'' ಎಂದು ದೂರಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

SCROLL FOR NEXT