ಸಿದ್ದರಾಮಯ್ಯ 
ರಾಜಕೀಯ

ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

ಬೆಂಗಳೂರು: ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ರಾಜ್ಯ ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರವಾಗಿದ್ದೇವೆ ಹೊರತು ಸರ್ಕಾರದ ಪರ ಅಲ್ಲ ಎಂದಿದ್ದಾರೆ. ಸಂಕಷ್ಟದ ಕಾಲದಲ್ಲಿ ಸಹಕಾರ ನೀಡಿದ್ದೇವೆ. ಆದರೆ ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಕಷ್ಟದ ಕಾಲದಲ್ಲಿ ಸಹಕಾರ,ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ. ಮುಖ್ಯಮಂತ್ರಿ ಬಿಎಸ್‌ವೈ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ