ಸಿದ್ದರಾಮಯ್ಯ 
ರಾಜಕೀಯ

ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ: ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ. ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

ಬೆಂಗಳೂರು: ಜನತೆಯ ಕಷ್ಟ-ನಷ್ಟಕ್ಕೆ ಕಾರಣವಾದ ಪ್ರಭುತ್ವದ ಜನವಿರೋಧಿ ನಡವಳಿಕೆಗಳಿಗೆ ಸಹಕರಿಸುವುದು ಜನದ್ರೋಹವಾಗುತ್ತದೆ.ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರ, ಸರ್ಕಾರದ ಪರ ಅಲ್ಲ ಎಂದು ಮುಂದಿನ ದಿನಗಳಲ್ಲಿ ರಾಜ್ಯ ಸರ್ಕಾರದ ವಿರುದ್ಧ ಹೋರಾಟದ ಸೂಚನೆಯನ್ನು ನೀಡಿದ್ದಾರೆ.

ಟ್ವಿಟ್ಟರ್‌ನಲ್ಲಿ ರಾಜ್ಯ ಸರ್ಕಾರವನ್ನು ಮತ್ತೆ ತರಾಟೆಗೆ ತೆಗೆದುಕೊಂಡಿರುವ ಸಿದ್ದರಾಮಯ್ಯ, ಜವಾಬ್ದಾರಿ ವಿರೋಧ ಪಕ್ಷವಾಗಿ ನಾವು ಜನರ ಪರವಾಗಿದ್ದೇವೆ ಹೊರತು ಸರ್ಕಾರದ ಪರ ಅಲ್ಲ ಎಂದಿದ್ದಾರೆ. ಸಂಕಷ್ಟದ ಕಾಲದಲ್ಲಿ ಸಹಕಾರ ನೀಡಿದ್ದೇವೆ. ಆದರೆ ತಪ್ಪುಗಳನ್ನು ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

ಕಷ್ಟದ ಕಾಲದಲ್ಲಿ ಸಹಕಾರ,ವಿರೋಧಪಕ್ಷದ ಜವಾಬ್ದಾರಿ ಎಂಬ ಕಾರಣಕ್ಕೆ ಹೆಚ್ಚುಕಡಿಮೆ 3ತಿಂಗಳು ಸರ್ಕಾರದ ಅಕ್ರಮ- ವೈಫಲ್ಯಗಳನ್ನು ಬಹಿರಂಗವಾಗಿ ಪ್ರಶ್ನಿಸದೆ ಪತ್ರಗಳನ್ನಷ್ಟೇ ಬರೆದಿದ್ದೆ. ಮುಖ್ಯಮಂತ್ರಿ ಬಿಎಸ್‌ವೈ ತಿದ್ದಿಕೊಳ್ಳದೆ ಇದ್ದಾಗ ಬಹಿರಂಗವಾಗಿ ಪ್ರಶ್ನಿಸುವುದು ಅನಿವಾರ್ಯವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT