ರಮೇಶ್ ಜಾರಕಿಹೊಳಿ 
ರಾಜಕೀಯ

ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕುಕ್ಕರ್ ಜಟಾಪಟಿ!

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ತಿಕ್ಕಾಟ ಈಗ ಮತ್ತಷ್ಟು ತಾರಕಕ್ಕೇರಿದೆ. 

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ತಿಕ್ಕಾಟ ಈಗ ಮತ್ತಷ್ಟು ತಾರಕಕ್ಕೇರಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ಹಣದಿಂದ. ಅದು ಅಕೀ ದುಡ್ಡಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಪರೋಕ್ಷವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹರಿಹಾಯ್ದಿದ್ದಾರೆ. 

ತಾಲೂಕಿನ ಹಿಂಡಲ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಗ್ರಾಮೀಣ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಅವರಿಗಿಂತ ಡಬಲ್ ದುಡ್ಡು ಖರ್ಚು ಮಾಡಲು ನಾನು ರೆಡಿ ಎಂದು ಹೇಳಿದ್ದಾರೆ. 

ಈ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಕುಕ್ಕರ್ ಹಂಚಿರುವ ಬಗ್ಗೆ ಲೆಕ್ಕ ಕೊಡಲಿ ಎಂದು ಸವಾಲು ಹಾಕಿದ್ದಾರೆ. 

ಸಾರ್ವಜನಿಕವಾಗಿ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಬಳಿ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುತ್ತೇನೆ. ಹರ್ಷ ಶುಗರ್ ಕಾರ್ಖಾನೆ ಉದ್ಘಾಟನೆ ವೇಳೆ ನಾನು ಜನರಿಗೆ ಕುಕ್ಕರ್ ವಿತರಿಸಿದ್ದೆ. ಚುನಾವಣಾ ಸಂದರ್ಭದಲ್ಲಿ ಅಲ್ಲ. ಕಾನೂನಾತ್ಮಕವಾಗಿ ತೆರಿಗೆಯನ್ನೂ ಕಟ್ಟುವುದರ ಜೊತೆಗೆ ನಾವು ಕುಕ್ಕರ್ ಖರೀದಿ ಮಾಡಿದ್ದೇವೆ. ನನ್ನ ಬಳಿ ಈ ಕುರಿತು ದಾಖಲೆಗಳಿವೆ. ಹಣ ನೀಡಿದ್ದೆ ಎಂದು ಹೇಳುತ್ತಿರುವ ಜಾರಕಿಹೊಳಿಯವರು ದಾಖಲೆಗಳನ್ನು ತೋರಿಸಲಿ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೆಲವರಿಗೆ ಜೀರ್ಣಿಸಿಕೊಳ್ಳಲು ಕಷ್ಟವಾಗಿದೆ: 7.8ರಷ್ಟು GDP ಬೆಳವಣಿಗೆಯ ಟೀಕಾಕಾರರನ್ನು ಖಂಡಿಸಿದ ಪ್ರಧಾನಿ ಮೋದಿ!

ಏಷ್ಯಾಕಪ್ 2026: ಪಾಕಿಸ್ತಾನ ನೀಡಿದ ಅಲ್ಪಮೊತ್ತದ ರನ್ ಬೆನ್ನಟ್ಟಿ ಗೆದ್ದ ಭಾರತ

ತುಂಗಭದ್ರಾ ಜಲಾಶಯದ ಹೂಳು ತೆರವು ಸಾಧ್ಯವಿಲ್ಲದಿದ್ದರೆ ಸಮಾನಾಂತರ ಜಲಾಶಯ ನಿರ್ಮಿಸಿ: ರಾಜ್ಯ ಸರ್ಕಾರಕ್ಕೆ ಬಿ.ವೈ. ವಿಜಯೇಂದ್ರ ಆಗ್ರಹ!

ಏಷ್ಯಾಕಪ್ 2026: 3 ಡಕೌಟ್, ಪಾಕಿಸ್ತಾನವನ್ನು 55 ರನ್‌ಗಳಿಗೆ ಆಲೌಟ್ ಮಾಡಿದ ಭಾರತ, ಕಳಪೆ ದಾಖಲೆ ಸೃಷ್ಟಿ!

'ದುಡ್ಡಿನ ಧಿಮಾಕು.. ಕಾರಿಗೇ ಬೆಂಕಿ ಹಾಕಿ ಬಾ ಅಂತ ಹೇಳಿದ್ದೆ': ನಟ 'ಯಶ್' ತಾಯಿ ಪುಷ್ಪ ಅರುಣ್ ಕುಮಾರ್!