ಸಂಗ್ರಹ ಚಿತ್ರ 
ರಾಜಕೀಯ

ನಿವೃತ್ತಿ ಹೊಂದಿದ 16 ಮಂದಿ ವಿಧಾನ ಪರಿಷತ್ ಸದಸ್ಯರಿಗಿಂದು ಬೀಳ್ಕೊಡುಗೆ

ರಾಜ್ಯ ವಿಧಾನ ಪರಿಷತ್'ನ 16 ಮಂದಿ ಸದಸ್ಯರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ವಿಧಾನಸೌಧದ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ಬೆಂಗಳೂರು: ರಾಜ್ಯ ವಿಧಾನ ಪರಿಷತ್'ನ 16 ಮಂದಿ ಸದಸ್ಯರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ವಿಧಾನಸೌಧದ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ವಿಧಾನಸಭೆಯಿಂದ ಆಯ್ಕೆಯಾಗಿರುವ 7, ನಾಮ ನಿರ್ದೇಶನಗೊಂಡಿರುವ 5 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ 2 ಸ್ಥಾನಗಳು ತೆರವುಗೊಂಡಿವೆ. 

ವಿಧಾನಸಭೆ ವಿಧಾನ ಪರಿಷತ್'ಗೆ ಆಯ್ಕೆಯಾಗಿರುವ ಜಯಮ್ಮ ಬೋಸರಾಜ್, ಹೆಚ್.ಎಂ.ರೇವಣ್ಣ ನಸೀರ್ ಅಹ್ಮದ್, ಎಂ.ಸಿ.ವೇಣುಗೋಪಾಸ್, ಟಿ.ಎ.ಶವರಣ, ಡಿಯು ಮಲ್ಲಿಕಾರ್ಜುನ, ನಾಮ ನಿರ್ದೇಶನಗೊಂಡಿರುವ ಜಯಮಾಲಾ ರಾಮಚಂದ್ರ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಇಕ್ಬಾಲ್ ಅಹಮ್ಮದ್ ಸರಡಗಿ, ತಿಪ್ಪಣ್ಣ ಕಮಕನೂರ್, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಚೌಡರೆಡ್ಡಿ ತೂಪ್ಪಿ, ಎಸ್.ವಿ.ಸಂಕನೂರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಪುಟ್ಟಣ್ಣ, ಶರಣಪ್ಪ ಮಟ್ಟೂರು ನಿವೃತ್ತರಾಗಿದ್ದಾರೆ. 

ನಿವೃತ್ತರಾಗಿರುವ 16 ಎಂಎಲ್'ಸಿ ಗಳಿಗೆ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೀಳ್ಕೊಡುಗೆ ವೇಳೆ ಫೋಟೋಶೂಟ್ ನಡೆಯಲಿದೆ. ಈ ಫೋಟೋ ಶೂಟ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಉಭಯ ಸದನಗಳ ನಾಯಕರು ಭಾಗಿಯಾಗಲಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT