ಸಂಗ್ರಹ ಚಿತ್ರ 
ರಾಜಕೀಯ

ನಿವೃತ್ತಿ ಹೊಂದಿದ 16 ಮಂದಿ ವಿಧಾನ ಪರಿಷತ್ ಸದಸ್ಯರಿಗಿಂದು ಬೀಳ್ಕೊಡುಗೆ

ರಾಜ್ಯ ವಿಧಾನ ಪರಿಷತ್'ನ 16 ಮಂದಿ ಸದಸ್ಯರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ವಿಧಾನಸೌಧದ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ಬೆಂಗಳೂರು: ರಾಜ್ಯ ವಿಧಾನ ಪರಿಷತ್'ನ 16 ಮಂದಿ ಸದಸ್ಯರು ನಿವೃತ್ತಿ ಹೊಂದಿದ ಹಿನ್ನೆಲೆಯಲ್ಲಿ ವಿಧಾನಸೌಧದ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. 

ವಿಧಾನಸಭೆಯಿಂದ ಆಯ್ಕೆಯಾಗಿರುವ 7, ನಾಮ ನಿರ್ದೇಶನಗೊಂಡಿರುವ 5 ಮತ್ತು ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರದ ತಲಾ 2 ಸ್ಥಾನಗಳು ತೆರವುಗೊಂಡಿವೆ. 

ವಿಧಾನಸಭೆ ವಿಧಾನ ಪರಿಷತ್'ಗೆ ಆಯ್ಕೆಯಾಗಿರುವ ಜಯಮ್ಮ ಬೋಸರಾಜ್, ಹೆಚ್.ಎಂ.ರೇವಣ್ಣ ನಸೀರ್ ಅಹ್ಮದ್, ಎಂ.ಸಿ.ವೇಣುಗೋಪಾಸ್, ಟಿ.ಎ.ಶವರಣ, ಡಿಯು ಮಲ್ಲಿಕಾರ್ಜುನ, ನಾಮ ನಿರ್ದೇಶನಗೊಂಡಿರುವ ಜಯಮಾಲಾ ರಾಮಚಂದ್ರ, ಅಬ್ದುಲ್ ಜಬ್ಬಾರ್, ಐವಾನ್ ಡಿಸೋಜಾ, ಇಕ್ಬಾಲ್ ಅಹಮ್ಮದ್ ಸರಡಗಿ, ತಿಪ್ಪಣ್ಣ ಕಮಕನೂರ್, ಪದವೀಧರ ಕ್ಷೇತ್ರದಿಂದ ಆಯ್ಕೆಯಾಗಿರುವ ಚೌಡರೆಡ್ಡಿ ತೂಪ್ಪಿ, ಎಸ್.ವಿ.ಸಂಕನೂರು ಹಾಗೂ ಶಿಕ್ಷಕರ ಕ್ಷೇತ್ರದಿಂದ ಆಯ್ಕೆಯಾಗಿರುವ ಪುಟ್ಟಣ್ಣ, ಶರಣಪ್ಪ ಮಟ್ಟೂರು ನಿವೃತ್ತರಾಗಿದ್ದಾರೆ. 

ನಿವೃತ್ತರಾಗಿರುವ 16 ಎಂಎಲ್'ಸಿ ಗಳಿಗೆ ಉಭಯ ಸದನಗಳಲ್ಲಿ ಬೀಳ್ಕೊಡುಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಬೀಳ್ಕೊಡುಗೆ ವೇಳೆ ಫೋಟೋಶೂಟ್ ನಡೆಯಲಿದೆ. ಈ ಫೋಟೋ ಶೂಟ್ ನಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೇರಿದಂತೆ ಉಭಯ ಸದನಗಳ ನಾಯಕರು ಭಾಗಿಯಾಗಲಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

SCROLL FOR NEXT