ಸಿದ್ದರಾಮಯ್ಯ 
ರಾಜಕೀಯ

ಜಾತ್ಯಾತೀತತೆ, ರಾಷ್ಟ್ರೀಯತೆ ತತ್ವಗಳ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಎಲ್ಲಾ ಅಂಶಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿದ್ದು ಇವುಗಳನ್ನು ಪಠ್ಯಕ್ರಮದಿಂದ ಕೈಬಿಟ್ಟರೆ ಇವುಗಳನ್ನು ಅರ್ಥಮಾಡಿಕೊಳ್ಳುವುದರಿಂದ ಇಂದಿನ ಮಕ್ಕಳನ್ನು ವಂಚಿತರನ್ನಾಗಿ ಮಾಡಿದಂತೆ ಆಗುತ್ತದೆ. ಪ್ರಜಾಪ್ರಭುತ್ವದಲ್ಲಿ ಇವುಗಳನ್ನು ಇಂದಿನ ಮಕ್ಕಳು ತಿಳಿದಿರಬೇಕಾಗಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ.

ಸಿಬಿಎಸ್ ಇ ಪಠ್ಯಕ್ರಮದಿಂದ ಇವುಗಳನ್ನು ಕೈಬಿಡಲು ಕಾರಣವೇನು ಎಂಬುದಕ್ಕೆ ಬಿಜೆಪಿ ವಿವರಣೆ ಕೊಡಬಲ್ಲದೇ, ಈ ತತ್ವಗಳಲ್ಲಿ ಅದಕ್ಕೆ ನಂಬಿಕೆಯಿಲ್ಲ ಎಂದರ್ಥವಲ್ಲವೇ, ಶಿಕ್ಷಣವನ್ನು ಕೂಡ ಕೇಸರಿಮಯ ಮಾಡುವ ದುರುದ್ದೇಶವನ್ನು ಬಿಜೆಪಿ ಕೈಬಿಡಬೇಕು ಎಂದು ಕಠುವಾಗಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರೋಧಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ಕೌಟುಂಬಿಕ ಹಿಂಸಾಚಾರ ಸಂತ್ರಸ್ಥರಿಗೆ ಬೆಂಗಳೂರಿನಲ್ಲಿ ಅಣಬೆ ಕೃಷಿ ತರಬೇತಿ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

SCROLL FOR NEXT