ಸಿದ್ದರಾಮಯ್ಯ 
ರಾಜಕೀಯ

ಜಾತ್ಯಾತೀತತೆ, ರಾಷ್ಟ್ರೀಯತೆ ತತ್ವಗಳ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಬೆಂಗಳೂರು: ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಎಲ್ಲಾ ಅಂಶಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿದ್ದು ಇವುಗಳನ್ನು ಪಠ್ಯಕ್ರಮದಿಂದ ಕೈಬಿಟ್ಟರೆ ಇವುಗಳನ್ನು ಅರ್ಥಮಾಡಿಕೊಳ್ಳುವುದರಿಂದ ಇಂದಿನ ಮಕ್ಕಳನ್ನು ವಂಚಿತರನ್ನಾಗಿ ಮಾಡಿದಂತೆ ಆಗುತ್ತದೆ. ಪ್ರಜಾಪ್ರಭುತ್ವದಲ್ಲಿ ಇವುಗಳನ್ನು ಇಂದಿನ ಮಕ್ಕಳು ತಿಳಿದಿರಬೇಕಾಗಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ.

ಸಿಬಿಎಸ್ ಇ ಪಠ್ಯಕ್ರಮದಿಂದ ಇವುಗಳನ್ನು ಕೈಬಿಡಲು ಕಾರಣವೇನು ಎಂಬುದಕ್ಕೆ ಬಿಜೆಪಿ ವಿವರಣೆ ಕೊಡಬಲ್ಲದೇ, ಈ ತತ್ವಗಳಲ್ಲಿ ಅದಕ್ಕೆ ನಂಬಿಕೆಯಿಲ್ಲ ಎಂದರ್ಥವಲ್ಲವೇ, ಶಿಕ್ಷಣವನ್ನು ಕೂಡ ಕೇಸರಿಮಯ ಮಾಡುವ ದುರುದ್ದೇಶವನ್ನು ಬಿಜೆಪಿ ಕೈಬಿಡಬೇಕು ಎಂದು ಕಠುವಾಗಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರೋಧಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

SCROLL FOR NEXT