ಸಚಿವ ಎಸ್.ಟಿ.ಸೋಮಶೇಖರ್ 
ರಾಜಕೀಯ

ಮೈಸೂರಿನಲ್ಲಿ ಕುಳಿತು ಆರೋಪ ಮಾಡುವುದಲ್ಲ, ವಿಧಾನಸೌಧಕ್ಕೆ ಬನ್ನಿ ದಾಖಲೆ ಕೊಡ್ತೀವಿ: ಸೋಮಶೇಖರ್

ಮೈಸೂರಿನಲ್ಲಿ ಕುಳಿತುಕೊಂಡು ಆರೋಪ ಮಾಡುವುದಲ್ಲ, ವಿಧಾನಸೌಧಕ್ಕೆ ಬನ್ನಿ ದಾಖಲೆ ಕೊಡುತ್ತೇವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿರುಗೇಟು ನೀಡಿದ್ದಾರೆ. 

ಮೈಸೂರು: ಮೈಸೂರಿನಲ್ಲಿ ಕುಳಿತುಕೊಂಡು ಆರೋಪ ಮಾಡುವುದಲ್ಲ, ವಿಧಾನಸೌಧಕ್ಕೆ ಬನ್ನಿ ದಾಖಲೆ ಕೊಡುತ್ತೇವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಆರೋಪಕ್ಕೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿರುಗೇಟು ನೀಡಿದ್ದಾರೆ. 

ಕೊರೋನಾ ಉಪಕರಣ ಖರೀದಿಯಲ್ಲಿ ಅವ್ಯವಹಾರ ನಡೆಸಲಾಗಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೆಸಾರ್ಟ್ ನಲ್ಲಿ ಕುಳಿತು ಆರೋಪಗಳನ್ನು ಮಾಡಬೇಡಿ, ವಿಧಾನಸೌಧಕ್ಕೆ ಬನ್ನಿ ನಿಮಗೆ ಬೇಕಾದ ದಾಖಲೆಗಳನ್ನು ಕೊಡುತ್ತೇವೆಂದು ಹೇಳಿದ್ದಾರೆ. 

ಕೊರೋನಾ ವಿಚಾರದಲ್ಲಿ ಅವ್ಯವಹಾರ ಮಾಡುವವರು ಮನುಷ್ಯತ್ವ ಇಲ್ಲದವರು. ನಾವು ಇದೂವರೆಗೂ ವೆಚ್ಚ ಮಾಡಿರುವುದೇ ರೂ.550 ಕೋಟಿ ಮಾತ್ರ. ರೂ.2,300 ಕೋಟಿ ಅವ್ಯವಹಾರ ನಡೆದಿದೆ ಎಂದಿರುವುದು ಆಧಾರ ರಹಿತ ಆರೋಪವಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT