ರಾಜಕೀಯ

ಶಾಸಕಾಂಗ ಸಮಿತಿಯ ಎಲ್ಲಾ ಸಭೆಗಳನ್ನು ರದ್ದುಗೊಳಿಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ

Shilpa D

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿಧಾನ ಮಂಡಲ ಶಾಸಕಾಂಗ ಸಮಿತಿ ಸಭೆಗಳನ್ನು ರದ್ದುಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಆದೇಶ ಬರುವವರೆಗೂ ಯಾವುದೇ ಸಮಿತಿ ಸಭೆ ನಡೆಸದಂತೆ  ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಕೋವಿಡ್ -19 ಹಣವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ನಡೆಸುತ್ತಿಲ್ಲ ಸಾರ್ವಜನಿಕ ಖಾತೆಗಳ ಸಮಿತಿಯನ್ನು ಸ್ಥಗಿತಗೊಳಿಸಿದೆ ಎಂದು  ಕಾಂಗ್ರೆಸ್ ಆರೋಪಿಸುತ್ತಿರುವ ಸಮಯದಲ್ಲೇ ಸ್ಪೀಕರ್ ಈ ಆದೇಶ ಹೊರಡಿಸಿದ್ದಾರೆ.

SCROLL FOR NEXT