ಡಿ ಕೆ ಶಿವಕುಮಾರ್ 
ರಾಜಕೀಯ

ಸಚಿವರು ಕೊವಿಡ್-19 ಆಸ್ಪತ್ರೆಗಳಿಗೆ ಭೇಟಿ ನೀಡಿ, ವೈದ್ಯರು, ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು: ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಇತರೆ ಮುಖಂಡರ ಜೊತೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಪೂರ್ವನಿಗದಿಯಂತೆ ಕೋವಿಡ್ ಸೋಂಕಿತರ ಕುಶಲೋಪಚರಿ ವಿಚಾರಿಸಲು ಮುಂದಾಗಿದ್ದರು. ಆದರೆ ಅವರಿಗೆ ವಿಕ್ಟೋರಿಯಾ....

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಪಕ್ಷದ ಇತರೆ ಮುಖಂಡರ ಜೊತೆಗೆ ನಗರದ ವಿಕ್ಟೋರಿಯಾ ಆಸ್ಪತ್ರೆಗೆ ಪೂರ್ವನಿಗದಿಯಂತೆ ಕೋವಿಡ್ ಸೋಂಕಿತರ ಕುಶಲೋಪಚರಿ ವಿಚಾರಿಸಲು ಮುಂದಾಗಿದ್ದರು. ಆದರೆ ಅವರಿಗೆ ವಿಕ್ಟೋರಿಯಾ ಭೇಟಿಗೆ ಅವಕಾಶ ಸಿಗಲಿಲ್ಲ. ಹೀಗಾಗಿ ಆಸ್ಪತ್ರೆಯ ಹೊರ ಆವರಣದಲ್ಲಿ ಆಸ್ಪತ್ರೆಯ ವೈದ್ಯಕಿಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಂದ ಸೋಂಕಿತರ ಬಗ್ಗೆ ಹಾಗೂ ಆಸ್ಪತ್ರೆಯ ಸ್ಥಿತಿಗತಿ ಬಗ್ಗೆ ಮಾಹಿತಿ ಪಡೆದು ಕೆಲಕಾಲ ಚರ್ಚಿಸಿದರು. ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ, ಅಧಿಕಾರಿಗಳು, ದಾದಿಯರು ಹಾಗೂ ಪೊಲೀಸರ ಸೇವಾಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಶ್ಲಾಘಿಸಿದರು.

ವಿಕ್ಟೋರಿಯಾ ಆಸ್ಪತ್ರೆ ಎದುರಿಗಿನ ಬೆಂಗಳೂರು ಮೆಡಿಕಲ್ ಕಾಲೇಜಿನಿಂದ ವಿಕ್ಟೋರಿಯಾ ಆಸ್ಪತ್ರೆ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಂಪರ್ಕ ಸಾಧಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು, ಅಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರು, ಚಿಕಿತ್ಸೆ ನೀಡುತ್ತಿರುವ ವೈದ್ಯರು, ನರ್ಸ್ ಗಳು ಹಾಗೂ ಸಿಬ್ಬಂದಿ ಜತೆ ಸಮಾಲೋಚನೆ ನಡೆಸಿ ವಿಕ್ಟೋರಿಯಾ ರೋಗಿಗಳೊಂದಿಗೆ ವಿಡಿಯೋ ಸಂವಾದ ನಡೆಸಿ, ಸೋಂಕಿತರಿಗೆ ಆತ್ಮವಿಶ್ವಾಸ ತುಂಬುವ ಪ್ರಯತ್ನ ಮಾಡಿ ಶೀಘ್ರಗುಣಮುಖರಾಗಲೆಂದು ಶಿವಕುಮಾರ್ ಹಾರೈಸಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, 4 ದಿನದ ಮಗುವಿನಿಂದ ಹಿಡಿದು 90 ವರ್ಷದ ವಯೋವೃದ್ಧರೂ‌, ಬಾಣಂತಿಯರು ಸಹ ವಿಕ್ಟೋರಿಯಾದಲ್ಲಿ ಗುಣಮುಖರಾಗಿ ಹೋದ ಉದಾಹರಣೆಯಿದೆ. ಈ ಆಸ್ಪತ್ರೆಯಿಂದ ಗುಣಮುಖರಾಗಿ ಹೋದವರಲ್ಲಿ ಅನೇಕರು ಇತರೆ ರೋಗಿಗಳಿಗೆ ಸಹಾಯ ಮಾಡಲು ಮುಂದಾಗಿರುವ ಬಗ್ಗೆ ಆಸ್ಪತ್ರೆಯವರು ಮಾಹಿತಿ ನೀಡಿದ್ದಾರೆ ಎಂದರು.

ಕೊರೋನಾದಿಂದ ನಾವು‌ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಇದರೊಂದಿಗೆ ಬದುಕಬೇಕಿದೆ. ಸೋಂಕಿತರಿಗೆ ಆತ್ಮವಿಶ್ವಾಸ ಮನೋಧೈರ್ಯ ತುಂಬಿದರೆ ಅರ್ಧಕ್ಕರ್ಧ ರೋಗವೇ ವಾಸಿಯಾದಂತಾಗುತ್ತದೆ ಎಂದರು.

ವಿಕ್ಟೋರಿಯಾಕ್ಕೆ ತಾವು ತಪ್ಪುಕಂಡುಹಿಡಿಯಲೋ ಅಥವಾ ಆರೋಪ ಮಾಡಲೆಂದೋ ಭೇಟಿಕೊಟ್ಟಿಲ್ಲ. ತಪ್ಪನ್ನೇ ಕಂಡುಹಿಡಿಯಬೇಕೆಂದರೆ‌ ನಮಲ್ಲೂ ನಿಮ್ಮಲ್ಲೂ ಎಲ್ಲರಲ್ಲಿಯೂ ತಪ್ಪುಕಂಡುಹಿಡಿಯಬಹುದು. ತಪ್ಪುಕಂಡು ಹಿಡಿಯಲು ಬೇರೆಬೇರೆ ವಿಚಾರಗಳಿವೆ. ವಿಧಾನಸೌಧದ ಹೊರಗೂ ಒಳಗೂ ಚರ್ಚಿಸಬಹುದು ಎಂದು ಮಾರ್ಮಿಕವಾಗಿ ನುಡಿದರು.

ಕೊರೋನಾ ಸೋಂಕಿತರ ಸೇವೆ ಮಾಡುವುದು ಅಷ್ಟು ಸುಲಭವಾದ ಕೆಲಸವೂ ಅಲ್ಲ. ಎಲ್ಲರೂ ಮಾನಸಿಕರಾಗಿ ಸಿದ್ಧರಿರಬೇಕು. ವೈದ್ಯಕೀಯ ಸಿಬ್ಬಂದಿಯೂ ಸಹ ಪ್ರಾಣ ಒತ್ತೆ ಇಟ್ಟು ಕೆಲಸ ಮಾಡುತ್ತಾರೆ. ಅವರು ಸಹ ಮನೋಸ್ಥೈರ್ಯದಿಂದಿರಬೇಕು. ಇದು ಅಷ್ಟು ಸುಲಭದ ಕೆಲಸವೂ ಅಲ್ಲ. ಆರೋಪ‌ ಮಾಡುವುದನ್ನು ಬಿಟ್ಟು ಧೈರ್ಯ ತುಂಬುವ ವಿಶ್ವಾಸಕ್ಕೆ ತೆಗೆದುಕೊಳ್ಳುವ ಕೆಲಸ ಮಾಡಬೇಕು ಎಂದು ಡಿ.ಕೆ.ಶಿವಕುಮಾರ್ ಧೈರ್ಯತುಂಬಿದರು. ಅಲ್ಲದೆ ಬಿಎಸ್ ವೈ ಸರ್ಕಾರದ ಸಚಿವರುಗಳು ಸಹ ಕೊವಿಡ್-19 ಆಸ್ಪತ್ರೆಗಳಿಗೆ ಭೇಟಿ ನೀಡಿ ವೈದ್ಯರು ಹಾಗೂ ಸೋಂಕಿತರಿಗೆ ಆತ್ಮಸ್ಥೈರ್ಯ ತುಂಬಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಜೊತೆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT