ಯಡಿಯೂರಪ್ಪ 
ರಾಜಕೀಯ

ದಿ. ಅನಂತ್ ಕುಮಾರ್ ಜನ್ಮದಿನ: ದಶಕಗಳ ರಾಜಕೀಯ ಜೀವನದ ಒಡನಾಡಿಯನ್ನು ಸ್ಮರಿಸಿದ ಸಿಎಂ

ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ. 

ಬೆಂಗಳೂರು: ದಿವಂಗತ ಕೇಂದ್ರ ಸಚಿವ ಅನಂತಕುಮಾರ್ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗೌರವ ಸಲ್ಲಿಸಿದ್ದಾರೆ. 

ಮುಖ್ಯಮಂತ್ರಿ ಟ್ವೀಟ್ ಮಾಡಿ, ಇಂದು ನನ್ನ ಆತ್ಮೀಯ ಮಿತ್ರ, ದಶಕಗಳ ರಾಜಕೀಯ ಜೀವನದ ಒಡನಾಡಿ, ಸಾರ್ವಜನಿಕ ಜೀವನದಲ್ಲಿ ಅಚ್ಚಳಿಯದ ನೆನಪು, ಸಾಧನೆ, ಸಾರ್ಥಕತೆಗಳನ್ನು ಬಿಟ್ಟುಹೋಗಿರುವ ಹಿರಿಯ ನಾಯಕ ಅನಂತಕುಮಾರ್ ಅವರ ಜನ್ಮದಿನ. ಲಕ್ಷಾಂತರ ಕಾರ್ಯಕರ್ತರ ಪಾಲಿಗೆ ಸದಾ ಸ್ಫೂರ್ತಿಯಾಗಿರುವ ಅನಂತಕುಮಾರ್, ರಾಜ್ಯದಲ್ಲಿ ಪಕ್ಷದ  ಬೆಳವಣಿಗೆ ಮತ್ತು ಸಂಘಟನೆಗೆ ನೀಡಿದ ಕೊಡುಗೆ ಅನನ್ಯ ಎಂದು ತಿಳಿಸಿದ್ದಾರೆ.

ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ನಮ್ಮ ಪಕ್ಷದ ಧೀಮಂತ ನಾಯಕರು ಮತ್ತು ನನ್ನ ಮಾರ್ಗದರ್ಶಿಗಳಾದ ಅನಂತ್ ಕುಮಾರ್ ಅವರ ಜಯಂತಿಯಂದು ನನ್ನ ಗೌರವ ಪೂರ್ವಕ ಪ್ರಣಾಮಗಳು. ತಮ್ಮ ಮೇರು ವ್ಯಕ್ತಿತ್ವ, ನಡೆ-ನುಡಿ, ಸಲಹೆಗಳ ಮೂಲಕ ಸಾಮಾಜಿಕ ಜೀವನಕ್ಕೆ ಆದರ್ಶವಾಗಿದ್ದ ಅವರ ನೆನಪು ಇಂದಿಗೂ ಕಾಡುತ್ತಿದೆ ಎಂದು ತಿಳಿಸಿದ್ದಾರೆ.

ಕ್ಯಾನ್ಸರ್ ನಿಂದ ಬಳಲುತ್ತಿದ್ದ ಬಿಜೆಪಿ ಹಿರಿಯ ನಾಯಕ ಅನಂತ್ ಕುಮಾರ್ ಅವರು 2018ರ ನವೆಂಬರ್ 12 ರಂದು ನಸುಕಿನ ಜಾವ 2 ಗಂಟೆ ಸುಮಾರಿಗೆ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT