ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

'ಬದುಕನ್ನೇ ಕಸಿಯುತ್ತಿರುವ ಸಮಯದಲ್ಲಿ ಅಕ್ರಮ ನಡೆದಿದ್ದರೆ, ಅದು ಮನುಷ್ಯ ಹೀನ ಕೃತ್ಯವೇ ಸರಿ'

ಕೊರೋನಾದಿಂದಾಗಿ ಜನ, ಜೀವನಕ್ಕೆ ಬೆದರಿಕೆ ಎದುರಾಗಿರುವ ಹೊತ್ತಿನಲ್ಲಿ ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷ ಕೆಸರೆರಚಾಟದಲ್ಲಿ ತೊಡಗಿರುವುದು ಬೇಸರ ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಹೆಸರು ಹೇಳದೇ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ.

ಬೆಂಗಳೂರು: ಕೊರೋನಾದಿಂದಾಗಿ ಜನ, ಜೀವನಕ್ಕೆ ಬೆದರಿಕೆ ಎದುರಾಗಿರುವ ಹೊತ್ತಿನಲ್ಲಿ ಹಳೇ ಪಕ್ಷ ಮತ್ತು ಆಡಳಿತಾರೂಢ ಪಕ್ಷ ಕೆಸರೆರಚಾಟದಲ್ಲಿ ತೊಡಗಿರುವುದು ಬೇಸರ ತರಿಸಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಅವರು ಹೆಸರು ಹೇಳದೇ ಕಾಂಗ್ರೆಸ್‌ ಮತ್ತು ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. 

ಕೋವಿಡ್ 19 ನಿಯಂತ್ರಣ ಸಂಬಂಧ ವೈದ್ಯಕೀಯ ಪರಿಕರ ಖರೀದಿಯಲ್ಲಿ ರಾಜ್ಯ ಸರ್ಕಾರ 2 ಸಾವಿರ ಕೋಟಿ ಅವ್ಯವಹಾರ ನಡೆಸಿದೆ ಎಂದು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆರೋಪ ಮಾಡಿದ್ದರು. ಈ ಆರೋಪಕ್ಕೆ ರಾಜ್ಯ ಸರ್ಕಾರದ ಸಚಿವರುಗಳು ನಾವು ಯಾವುದೇ ಅವ್ಯವಹಾರ ಎಸಗಿಲ್ಲ ಎಂದು ಸ್ಪಷ್ಟನೆ ನೀಡಿದ್ದರು. ಆರೋಪ-ಪ್ರತ್ಯಾರೋಪ ಸಂಬಂಧ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಟ್ವೀಟ್ ಮಾಡಿ, ಎರಡು ಪಕ್ಷಗಳಿಗೂ ಕಿವಿಹಿಂಡಿದ್ದಾರೆ.

ಕೋವಿಡ್-19 ಪರಿಕರಗಳ ಖರೀದಿ ಅಕ್ರಮದ ಬಗೆಗಿನ ಅತ್ಯಂತ ಹಳೇ ರಾಷ್ಟ್ರೀಯ ಪಕ್ಷವೊಂದರ ಆರೋಪ, ಅದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಪ್ರತ್ಯಾರೋಪ, ಕಸರೆರಚಾಟವನ್ನು ಗಮನಿಸಿದೆ. ಕೋವಿಡ್‌ ಈ ರಾಜ್ಯದ ಪ್ರತಿಯೊಬ್ಬನ ಜೀವ, ಜೀವನಕ್ಕೆ ಬೆದರಿಕೆಯೊಡ್ಡಿರುವಾಗ, ಬದುಕನ್ನೇ ಕಸಿಯುತ್ತಿರುವಾಗ ಎರಡೂ ಪಕ್ಷಗಳ ಬೇಜವಾಬ್ದಾರಿ ವರ್ತನೆ ಕಂಡು ಬೇಸರವಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪರಿಕರಗಳ ಖರೀದಿಯಲ್ಲಿ ಸರ್ಕಾರ ಅಕ್ರಮ ಎಸಗಿದ್ದರೆ ಅದು ನಿಜಕ್ಕೂ ಹೀನ ಕೃತ್ಯವೇ ಸರಿ. ಇಲ್ಲವೇ ಕೇವಲ ಸುದ್ದಿಯಲ್ಲಿ ಇರುವ ಸಲುವಾಗಿ ಕಾಂಗ್ರೆಸ್ ಈ ಆರೋಪ ಮಾಡಿದ್ದರೆ ಅದು ಆ ಪಕ್ಷದ ನಾಯಕರ ರಾಜಕೀಯ ದಾಹದ ಸೂಚಕ ಎಂದು ಎರಡು ಪಕ್ಷಗಳ ನಾಯಕರ ಕಾಲೆಳೆದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT