ಉಮೇಶ್ ಕತ್ತಿ ಮತ್ತು ಪ್ರಭಾಕರ್ ಕೋರೆ 
ರಾಜಕೀಯ

ಬಿಜೆಪಿ ಬೇಗುದಿ: ರಾಜ್ಯಸಭೆ ಟಿಕೆಟ್ ಗಾಗಿ 'ಕತ್ತಿ' ಕೊತ ಕೊತ; 'ಕೋರೆ' ಶಾಂತ!

ರಾಜ್ಯಸಭೆ ಚುನಾವಣೆ ಟಿಕೆಟ್ ಗಾಗಿ  ಬಿಜೆಪಿಯಲ್ಲಿ ಲಾಬಿ ಮುಂದುವರಿದಿದೆ,  ಹಾಲಿ ಸಂಸದ ಪ್ರಭಾಕರ ಕೋರೆ ಯಾವುದೇ ಲಾಬಿ ಮಾಡದೇ ಹೈಕಮಾಂಡ್ ಮೇಲೆ ಭಾರ ಹಾಕಿ ಶಾಂತವಾಗಿ ಕುಳಿತಿದ್ದಾರೆ.

ಬೆಳಗಾವಿ: ರಾಜ್ಯಸಭೆ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಲಾಬಿ ಮುಂದುವರಿದಿದೆ, ಹಾಲಿ ಸಂಸದ ಪ್ರಭಾಕರ ಕೋರೆ ಯಾವುದೇ ಲಾಬಿ ಮಾಡದೇ ಹೈಕಮಾಂಡ್ ಮೇಲೆ ಭಾರ ಹಾಕಿ ಶಾಂತವಾಗಿ ಕುಳಿತಿದ್ದಾರೆ.

8 ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಉಮೇಶ್ ಕತ್ತಿ ಮತ್ತು ಅವರಸಹೋದರ ರಮೇಶ್ ಕತ್ತಿ ರಾಜ್ಯಸಭೆ ಟಿಕೆಟ್ ಗಾಗಿ ಲಾಬಿ ಮುಂದುವರಿಸಿದ್ದಾರೆ. ಪ್ರಭಾಕರ್ ಕೊರೆ ಅವಧಿ ಮುಗಿದಿರುವ ಕಾರಣ ತಮ್ಮ ಸಹೋದರನಿಗೆ ಟಿಕೆಟ್ ನೀಡುವಂತೆ ಲಾಬಿ ನಡೆಸಿದ್ದಾರೆ, ಈ ಹಿಂದೆ ಯಡಿಯೂರಪ್ಪ ಸಂಪುಟದಲ್ಲಿ  ಸಚಿವ ಸ್ಥಾನ ನೀಡುವಂತೆ ಒತ್ತ ಹೇರಿದ್ದರು ಉಮೇಶ್ ಕತ್ತಿ. 

ಉಮೇಶ್ ಕತ್ತಿಯೂ ಟಿಕೆಟ್ ಗಾಗಿ ಒತ್ತಡ ಹಾಕಲಿ ನಾನು ಕೂಡ ಬೇಡಿಕೆಯಿಟ್ಟಿದ್ದೇನೆ, ಪಕ್ಷದ ಹೈ ಕಮಾಂಡ್ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಕೋರೆ ಹೇಳಿದ್ದಾರೆ.

ರಮೇಶ್ ಕತ್ತಿ ಅವರಿಗೆ ಚಿಕ್ಕೋಡಿಯಿಂದ ಲೋಕಸಭಾ ಚುನಾವಣೆಯ ಟಿಕೆಟ್ ತಪ್ಪಲು ನಾನು ಕಾರಣವಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. ಲೋಕಸಭೆ ಚುನಾವಣೆ ಟಿಕೆಟ್ ಅನ್ನು ನನಗೂ ನೀಡಿಲ್ಲ, ರಮೇಶ್ ಕತ್ತಿಗೂ ನೀಡಿಲ್ಲ ಅಂತಿಮವಾಗಿ ಅಣ್ಣಾ ಸಾಹೇಬ್ ಜೊಲ್ಲೆ ಅವರಿಗೆ ನೀಡಿತು ಎಂದು ಹೇಳಿದ್ದಾರೆ, ಸದ್ಯ  ರಾಜ್ಯ ರಾಜಕಾರಣದಲ್ಲಿ  ಯಾವುದೇ  ನಾಯಕತ್ವದ ಬದಲಾವಣೆಯಿಲ್ಲ, ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT