ಸಾ ರಾ ಮಹೇಶ್ 
ರಾಜಕೀಯ

ಮೈಸೂರಿಗೊಬ್ಬ ಆ್ಯಕ್ಟಿಂಗ್ ಮಿನಿಸ್ಟರ್: ಸಾ.ರಾ.ಮಹೇಶ್ ಕುಹಕ

ಮೈಸೂರಿಗೆ ಒಬ್ಬರು ಆ್ಯಕ್ಟಿಂಗ್, ಮತ್ತೊಬ್ಬರು ಅಧಿಕೃತ ಸಚಿವರಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಕುಹಕವಾಡಿದ್ದಾರೆ.

ಮೈಸೂರು: ಮೈಸೂರಿಗೆ ಒಬ್ಬರು ಆ್ಯಕ್ಟಿಂಗ್, ಮತ್ತೊಬ್ಬರು ಅಧಿಕೃತ ಸಚಿವರಿದ್ದಾರೆ ಎಂದು ಮಾಜಿ ಸಚಿವ, ಜೆಡಿಎಸ್ ಮುಖಂಡ ಸಾ.ರಾ.ಮಹೇಶ್ ಕುಹಕವಾಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಣಸೂರಿನ ಜನ ಅವರನ್ನು 90 ಸಾವಿರ ಮತಗಳ ಅಂತರದಲ್ಲಿ ಗೆಲ್ಲಿಸಿದ್ದರು. ಈಗ ಅದರ ಅರ್ಧದಷ್ಟು ಮತಗಳಿಂದ ಸೋಲಿಸಿದ್ದಾರೆ. ಆ ಮಹಾಶಯನ ಹೆಸರು ನಾನು ಹೇಳುವುದಿಲ್ಲ ಎಂದು ಪರೋಕ್ಷವಾಗಿ ಹೆಚ್.ವಿಶ್ವನಾಥ್ ವಿರುದ್ಧ ಕಿಡಿಕಾರಿದರು.

ಜಿಲ್ಲಾ ಸಚಿವರ ಗಮನಕ್ಕೆ ಬಾರದಂತೆ ಮೈಸೂರಿನಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ. ಅಬಕಾರಿ ಜಿಲ್ಲಾಧಿಕಾರಿಗಳನ್ನು ಕೇವಲ 9 ತಿಂಗಳಲ್ಲಿನಲ್ಲಿಯೇ ಏಕಾಏಕಿ ವರ್ಗಾವಣೆ ಮಾಡಲಾಗಿದೆ. ಪತ್ರ ವ್ಯವಹಾರ ಮಾಡಿದವರು ಯಾರು ಎಂದು ವಿಶ್ವನಾಥ್ ಹೆಸರು ಹೇಳದೇ ಪ್ರಶ್ನಿಸಿದರು.

ಅಬಕಾರಿ ಇಲಾಖೆಯಲ್ಲಿ 2 ಕೋಟಿ ಅವ್ಯವಹಾರ, ಲೋಕೋಪಯೋಗಿ ಇಲಾಖೆಯಲ್ಲಿ 50 ಲಕ್ಷ ರೂ.ಗೆ ಎಇ ಹುದ್ದೆಗೆ ನೇಮಕ, ಅಕ್ಕಿ ಗಿರಣಿಗಳಿಂದ ಲಾರಿಗಟ್ಟಲೆ ಅಕ್ಕಿ ಸಂಗ್ರಹ, ಈ ಎಲ್ಲ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ತಾವು ಪತ್ರ ಬರೆದಿರುವುದಾಗಿ ಸಾ.ರಾ.ಮಹೇಶ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

Video: 80 ಸಾವಿರ ಹಣವಿದ್ದ ಬ್ಯಾಗ್ ನಾಪತ್ತೆ, ಮೇಲಿಂದ ಕೋತಿಯಿಂದ ಹಣದ ಸುರಿಮಳೆ! ಸಿಕ್ಕಿದೆಷ್ಟು ಗೊತ್ತಾ?

Dharmasthala: Mahesh Shetty Thimarodi ಮನೆ ಮಹಜರು, ಪತ್ನಿ-ಮಕ್ಕಳ ಮೊಬೈಲ್ ವಶಕ್ಕೆ, 3 ತಲ್ವಾರ್ ಕೂಡ ಪತ್ತೆ!

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ; Indian Army ಹೆಲಿಕಾಪ್ಟರ್ ರೋಚಕ ಕಾರ್ಯಾಚರಣೆ! Video

SCROLL FOR NEXT