ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ 
ರಾಜಕೀಯ

ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಉತ್ತರ ಕರ್ನಾಟಕದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಜೂನ್ 19 ರಂದು ನಡೆಯುವ ನಾಲ್ಕು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.

ರಾಯಚೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.

ರಾಜ್ಯ ಸಭೆ ಚುನಾವಣೆ ಟಿಕೆಟ್ ನ ಪ್ರಬಲ ಆಕಾಂಕ್ಷಿಗಳಾಗಿದ್ದ ಹಾಲಿ ಸದಸ್ಯ ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ, ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT