ಎಚ್ ಡಿ ಕುಮಾರಸ್ವಾಮಿ 
ರಾಜಕೀಯ

ದೇವೇಗೌಡರಿಗೆ ಕಾಂಗ್ರೆಸ್ ಬೆಂಬಲ, ಆದರೆ ಯಾವುದೇ ಮೈತ್ರಿಯಿಲ್ಲ: ಎಚ್ ಡಿ ಕುಮಾರಸ್ವಾಮಿ

ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. 

ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಅವರು ರಾಜ್ಯಸಭೆಗೆ ಆಯ್ಕೆಯಾಗಬೇಕು ಎನ್ನುವುದು ರಾಷ್ಟ್ರಮಟ್ಟದ ನಾಯಕರ ಬಯಕೆಯಾಗಿತ್ತು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರ ಸ್ವಾಮಿ ಹೇಳಿದ್ದಾರೆ. 

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ಗೌಡರನ್ನು ರಾಜ್ಯಸಭೆಗೆ ಆಯ್ಕೆ ಮಾಡುವ ಕುರಿತಂತೆ ತಾವು ಯಾವುದೇ ಪಕ್ಷದ ನಾಯಕರ ಜೊತೆ ಚರ್ಚೆ ಮಾಡಿಲ್ಲ. ದೇವೇಗೌಡರು ರಾಜ್ಯಸಭೆಗೆ ಸ್ಪರ್ಧಿಸಬೇಕೆಂಬುದು ರಾಷ್ಟ್ರಮಟ್ಟದಲ್ಲಿ ಚರ್ಚೆಯಾಗಿದೆ. ಇದಕ್ಕೆ ಕಾಂಗ್ರೆಸ್ ಪಕ್ಷ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ. ಆದರೆ ಎರಡೂ ಪಕ್ಷಗಳ ನಾಯಕರ ನಡುವೆ ಯಾವುದೇ ರಾಜಕೀಯ ಹೊಂದಾಣಿಕೆಯಾಗಿಲ್ಲ. ಮೈತ್ರಿಯೂ ಏರ್ಪಟ್ಟಿಲ್ಲ ಎಂದರು.

ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರು ಗೌಡರನ್ನು ರಾಜ್ಯಸಭೆಗೆ ಸ್ಪರ್ಧಿಸುವಂತೆ  ಮನವರಿಕೆ ಮಾಡಿಕೊಟ್ಟಿದ್ದಾರೆ. ಪಕ್ಷದ ಶಾಸಕರು ಮುಖಂಡರೊಡನೆ ಚರ್ಚಿಸಿ ಸ್ಪರ್ಧೆಗೆ ಅನುಮತಿ ನೀಡಿದ್ದಾರೆ ಎಂದರು. 

ದೇವೇಗೌಡರು ರಾಜ್ಯದ ಪರ ಧ್ವನಿ ಎತ್ತುತ್ತಾರೆ ಎಂದು ಅವರನ್ನು ರಾಷ್ಟ್ರರಾಜಕಾರಣಕ್ಕೆ ಕಳುಹಿಸಿಕೊಡಲಾಗುತ್ತಿದೆ. ದೇವೇಗೌಡರು ತಮ್ಮ ರಾಜಕೀಯ ಜೀವನದಲ್ಲಿ ಪ್ರಧಾನಿ ಹುದ್ದೆಯೂ ಸೇರಿದಂತೆ ಎಲ್ಲಾ ಸ್ಥಾನಮಾನ ನೋಡಿದವರು. ಅವರ ಗೆಲುವಿನ ಹಿಂದೆ ಹಲವು ಧ್ವನಿ ಗಳಿರುತ್ತವೆ. ಸೋಲಿನ ಹಿಂದೆ ಯಾವುದೇ ಧ್ವನಿ ಇರುವುದಿಲ್ಲ. ಯಾರು ಬೇಕಾದರೂ ದೇವೇಗೌಡರನ್ನು ಬೆಂಬಲಿಸಬಹುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT