ರಾಜಕೀಯ

ಗೆದ್ದಾಗ ತಲೆ ತಿರುಗಿಲ್ಲ: ಸೋತಾಗ ಕುಗ್ಗಿಲ್ಲ: ಮಾಜಿ ಸಿಎಂ ಎಚ್ಡಿ ಕುಮಾರ ಸ್ವಾಮಿ

Vishwanath S

ರಾಮನಗರ: ಗೆದ್ದಾಗ ನಮ್ಮ ತಲೆತಿರುಗಿಲ್ಲ, ಸೋತಾಗ ಕುಗ್ಗಿಲ್ಲ. ಜನರಿಗಾಗಿ ಇರುವ ಕುಟುಂಬ ತಮ್ಮದು ಎಂದು ಜೆಡಿಎಸ್ ಶಾಸಕಾಂಗ ನಾಯಕ, ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡರು ರಾಜ್ಯಸಭೆ ಚುನಾವಣೆಗೆ ಪ್ರವೇಶ ದೇವರ ಇಚ್ಛೆ ಎಂದರು. 

ಹೆಚ್.ಡಿ.ದೇವೇಗೌಡರು ಈ ಹಿಂದೆಯೇ ಲೋಕಸಭೆಯಲ್ಲಿ ವಿದಾಯ ಹೇಳಿದ್ದರು. ಇದೇ ನನ್ನ ಕೊನೆಯ ಭಾಷಣ ಎಂದಿದ್ದರು. ಆದರೆ ಜನರ ಒತ್ತಾಯಕ್ಕೆ ಮಣಿದು ತುಮಕೂರಿನಲ್ಲಿ ಸ್ಪರ್ಧೆ ಮಾಡಿದರು. ಅಲ್ಲಿಯ ಜನರು ಚುನಾವಣೆಯಲ್ಲಿ ಅವರನ್ನು ಸೋಲಿಸಿದರು. ಈಗ ಅವರ ಅನುಭವದ ದೃಷ್ಟಿಯಿಂದ ರಾಜ್ಯಸಭೆಗೆ ಹೋಗುತ್ತಿದ್ದಾರೆ ಎಂದರು.

ರಾಜ್ಯದ ಸಮಸ್ಯೆಗಳ ಬಗ್ಗೆ ಪ್ರಧಾನಿಯ ಮುಂದೆ ಗಟ್ಟಿಧ್ವನಿಯಾಗಯವವರು ಬೇಕಾಗಿದ್ದಾರೆ. ಹಾಗಾಗಿ ದೇವೇಗೌಡರು ರಾಜ್ಯಸಭೆಗೆ ಪ್ರವೇಶ ಮಾಡಿದ್ದಾರೆಯೇ ಹೊರತು ಇದರಲ್ಲಿ ಬೇರೆ ಉದ್ದೇಶ ಇಲ್ಲ ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

SCROLL FOR NEXT