ನಿಸರ್ಗ ಗೋವಿಂದರಾಜು 
ರಾಜಕೀಯ

ಪರಿಷತ್ ಚುನಾವಣೆ: ಕೋಲಾರದ ಉದ್ಯಮಿ ಗೋವಿಂದರಾಜುಗೆ ಜೆಡಿಎಸ್ ಟಿಕೆಟ್

 ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಕೋಲಾರದ ಉದ್ಯಮಿ ನಿಸರ್ಗ ಗೋವಿಂದರಾಜ್ ಸಫಲರಾಗಿದ್ದಾರೆ. 

ಬೆಂಗಳೂರು: ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯುವ ದ್ವೈವಾರ್ಷಿಕ ಚುನಾವಣೆಯಲ್ಲಿ ಜೆಡಿಎಸ್ ಟಿಕೆಟ್ ಪಡೆಯುವಲ್ಲಿ ಕೋಲಾರದ ಉದ್ಯಮಿ ನಿಸರ್ಗ ಗೋವಿಂದರಾಜ್ ಸಫಲರಾಗಿದ್ದಾರೆ. 

ಪಕ್ಷದ ವರಿಷ್ಢ ಎಚ್. ಡಿ‌.ದೇವೇಗೌಡ ಅವರು ಗೋವಿಂದರಾಜ್‌ಗೆ ಬಿ ಫಾರಂ ನೀಡಿದ್ದಾರೆ. ಟಿ.ಎ.ಶರವಣ ಅವರಿಂದ ತೆರವಾಗುತ್ತಿರುವ ಸ್ಥಾನವನ್ನು ಗೋವಿಂದರಾಜ್ ತುಂಬಲಿದ್ದಾರೆ. ಶರವಣ ಅವರಲ್ಲದೆ, ಕುಪೇಂದ್ರ ರೆಡ್ಡಿ ಮತ್ತು ಕಬಡ್ಡಿ ಬಾಬು ಟಿಕೆಟ್‌ಗಾಗಿ ಭಾರಿ ಪ್ರಯತ್ನ ನಡೆಸಿದ್ದರು.

ಕೋಲಾರ ಜಿಲ್ಲೆಯಲ್ಲಿ ಕೋಟ್ಯಂತರ ರೂಪಾಯಿ ಬೆಲೆಬಾಳುವ ಆಸ್ತಿಪಾಸ್ತಿ ಹೊಂದಿರುವ ಗೋವಿಂದರಾಜು ಪ್ರಸ್ತುತ ಉದ್ಯಮಿಯಾಗಿದ್ದಾರೆ. ಹಲವು ವರ್ಷಗಳಿಂದ ಜೆಡಿಎಸ್ ಪಕ್ಷದ ಬೆನ್ನೆಲುಬಾಗಿ ಇದ್ದುಕೊಂಡು, ಪಕ್ಷದ ಮುನ್ನೆಲೆಗೆ ಬಾರದೆ, ಕಾರ್ಯಕರ್ತನೂ ಆಗದೆ ಸಲಹೆ ಸೂಚನೆ, ಹಾಗು‌ ಆರ್ಥಿಕವಾಗಿ ಜಿಲ್ಲೆಯಲ್ಲಿ ಎಲ್ಲಾ ಮುಖಂಡರಿಗೂ ಬೆಂಬಲ ನೀಡುತ್ತಾ
ಬಂದಿದ್ದಾರೆ. ಹೀಗೆ ಪಕ್ಷದ ಅಭಿವೃದ್ಧಿಗೆ ಶ್ರಮಿಸಿ ವರಿಷ್ಠರ ಕಡೆಯಿಂದಲೂ ವಿಶ್ವಾಸ ಗಿಟ್ಟಿಸಿಕೊಂಡಿದ್ದಾರೆ. ಅದಕ್ಕೆ ಬಯಸದೇ ಇದ್ದರೂ ಕರೆದು ಟಿಕೆಟ್ ಕೊಡಲಾಗಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT